Categories: ಕೋಲಾರ

ಎಪಿಎಂಸಿ ಜಾಗ, ಮೆಡಿಕಲ್ ಕಾಲೇಜು, ಕೆಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಜಿಲ್ಲಾ ಕೇಂದ್ರದಲ್ಲಿ ಎಪಿಎಂಸಿ ಮಾರುಕಟ್ಟೆಗೆ ಜಾಗ ಮಂಜೂರು ಸೇರಿದಂತೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಬಜೆಟ್ ನಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಒತ್ತಾಯಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಟೊಮೆಟೊ‌ ಹಾಗೂ ತರಕಾರಿ ಮಾರುಕಟ್ಟೆಯ ಸಮಸ್ಯೆಗಳು ಆಗರವಾಗಿದೆ ಪಕ್ಕದ ರಾಜ್ಯದ ವಿ.ಕೋಟಾದಲ್ಲಿ ಸುಮಾರು100 ಎಕರೆಯಲ್ಲಿ ಮಾರುಕಟ್ಟೆ ನಿರ್ಮಿಸುತ್ತಿದ್ದು, ಅದು ಸಿದ್ಧವಾದರೆ 50 ಕಿ.ಮೀ ದೂರವಿರುವ ಅಲ್ಲಿಗೆ ಮಾರಾಟಗಾರರು, ವರ್ತಕರು ಹೋಗುತ್ತಾರೆ. ಇಲ್ಲಿನ ಎಪಿಎಂಸಿಗೆ ನಷ್ಟವಾಗಲಿದೆ ಸರ್ಕಾರವು ಕೈಗಾರಿಕೆಗಳಿಗೆ ಜಾಗ ಕೊಡುತ್ತಾರೆ, ಆದರೆ, ರೈತರಿಗಾಗಿ‌ ಇರುವ ಎಪಿಎಂಸಿಗೆ ಜಾಗ ಕೊಡುತ್ತಿಲ್ಲ ಕೂಡಲೇ ಈ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರುವ ಕೆ.ಸಿ.ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿಯ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಅನುದಾನ ಮೀಸಲಿಟ್ಟು ಸುಮಾರು ವರ್ಷಗಳಿಂದ ಎತ್ತಿನಹೊಳೆ ಯೋಜನೆಯ ಮೂಲಕ ನೀರು ಕೊಡತ್ತೇವೆ ಎಂದು ನಮ್ಮನ್ನು ಆಳುವ ಸರ್ಕಾರಗಳು ಮೂರ್ಖರನ್ನಾಗಿಸುತ್ತಿದೆ‌ ವರ್ಷದಲ್ಲಿ ಹಣ ಬಿಡುಗಡೆ ಮಾಡಿ ಯೋಜನೆ ಪೂರ್ಣಗೊಳಿಸಬೇಕು ಕೃಷ್ಣಾ ನದಿಯ ಬಿ ಸ್ಕೀಮ್ ನಲ್ಲಿ ನಮ್ಮ ಪಾಲಿನ ನೀರು ತರಲು ಅನುದಾನ ಕೊಡಬೇಕು ಬಜೆಟ್‌ನಲ್ಲಿ ಜಿಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದೆ ಉಗ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು,

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬೆಟ್ಟಶೆಟ್ಟಹಳ್ಳಿ ರಮೇಶ್ ಮಾತನಾಡಿ ಜಿಲ್ಲೆಯ ರೈತರು ಸ್ವಾಭಿಮಾನಿಗಳು ಕಷ್ಟಕರ ಪಟ್ಟು ಟೊಮೆಟೊ ಆಲೂಗಡ್ಡೆ ಸೇರಿದಂತೆ ತರಕಾರಿಗಳನ್ನು ಬೆಳೆಯುತ್ತಾರೆ ಆದರೆ ಅವುಗಳಿಗೆ ಸಂಸ್ಕರಣಾ ಘಟಕವಿಲ್ಲದೇ ಸಮಸ್ಯೆಯಾಗುತ್ತಿದೆ ಕೂಡಲೇ ಸಂಸ್ಕರಣಾ ಘಟಕ ಸ್ಥಾಪಿಸಬೇಕು ವೈದ್ಯಕೀಯ ಹಾಗೂ ಇಂಜಿನಿಯರ್ ಕಾಲೇಜಿಗೆ ಬಂಗಾರಪೇಟೆ ತಾಲ್ಲೂಕಿನ ಗಡಿ ಭಾಗದಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು ಶಾಶ್ವತ ಪರಿಹಾರ ನೀಡಲು ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಬಯಲುಸೀಮೆ ವಿಭಾಗದ ಕಾರ್ಯದರ್ಶಿ ಪ್ರಭಾಕರ್ ಮಾತನಾಡಿ ಕೋಲಾರ ಜಿಲ್ಲೆಯಾದ್ಯಂತ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕ ಹಿಡಿಶಾಪ ಹಾಕುತ್ತಿದ್ದಾರೆ ಕೂಡಲೇ ಹಣ ಬಿಡುಗಡೆ ಮಾಡಿ ರಸ್ತೆಗಳ ದುರಸ್ತಿ ಮಾಡಬೇಕು ವಿಶ್ವದಲ್ಲೇ ಹೆಚ್ಚು ಮಾವು ಬೆಳೆಯುವ ಶ್ರೀನಿವಾಸಪುರ ತಾಲೂಕಿನಲ್ಲಿ ಮಾವಿನ ಸಂಸ್ಕರಣಾ ಘಟಕವನ್ನು ಮಂಜೂರು ಮಾಡಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ, ಹಸಿರು ಸೇನೆ ರಾಜ್ಯ ಸಂಚಾಲಕ ಕೆ.ಆನಂದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಹಳ್ಳಿ ರಮೇಶ್, ಮುಖಂಡರಾದ ತಿಮ್ಮಾರೆಡ್ಡಿ, ಚಿನ್ನಾಪುರ ಮಂಜುನಾಥ್, ಗುರುಪ್ಪ, ತಿಪ್ಪಸಂದ್ರ ಹರೀಶ್, ಶ್ರೀನಿವಾಸ್, ಸತೀಶ್, ಶ್ಯಾಮಸುಂದರ್, ಶಿವಕುಮಾರ್, ಚೌಡಪ್ಪ, ಸೀನಪ್ಪ ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

12 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

23 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago