Categories: ಕೋಲಾರ

ಎಫ್.ಆರ್.ಎಸ್ ತಡೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಗುರುವಾರ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿದರು

ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು

ದೇಶದಲ್ಲಿ 2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆ ಎಂದು ದೂರಿದರು.

ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆʼ ಎಂದು ದೂರಿದರು.

ಕಾರ್ಯಕರ್ತರಿಗೆ 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ಲಕ್ಷ್ಮೀದೇವಿ, ರಾಜಮ್ಮ, ಲೋಕೇಶ್ವರಿ, ಗೌರಮ್ಮ, ತಿಮ್ಮಕ್ಕ, ಅಂಜನಮ್ಮ, ಲಾಲು, ರಾಜಮ್ಮ, ಅನುಸೂಯ, ಮುನಿರತ್ನ, ಮುಂತಾದವರು ಭಾಗವಹಿಸಿದ್ದರು

Ramesh Babu

Journalist

Recent Posts

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

2 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

3 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

6 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

7 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

9 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

19 hours ago