Categories: ಕೋಲಾರ

ಎಫ್.ಆರ್.ಎಸ್ ತಡೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಗುರುವಾರ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿದರು

ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು

ದೇಶದಲ್ಲಿ 2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆ ಎಂದು ದೂರಿದರು.

ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆʼ ಎಂದು ದೂರಿದರು.

ಕಾರ್ಯಕರ್ತರಿಗೆ 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ಲಕ್ಷ್ಮೀದೇವಿ, ರಾಜಮ್ಮ, ಲೋಕೇಶ್ವರಿ, ಗೌರಮ್ಮ, ತಿಮ್ಮಕ್ಕ, ಅಂಜನಮ್ಮ, ಲಾಲು, ರಾಜಮ್ಮ, ಅನುಸೂಯ, ಮುನಿರತ್ನ, ಮುಂತಾದವರು ಭಾಗವಹಿಸಿದ್ದರು

Ramesh Babu

Journalist

Recent Posts

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

2 hours ago

ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…

2 hours ago

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

4 hours ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

1 day ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

1 day ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago