Categories: ಕೋಲಾರ

ಎಫ್.ಆರ್.ಎಸ್ ತಡೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಗುರುವಾರ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿದರು

ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು

ದೇಶದಲ್ಲಿ 2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆ ಎಂದು ದೂರಿದರು.

ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆʼ ಎಂದು ದೂರಿದರು.

ಕಾರ್ಯಕರ್ತರಿಗೆ 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ಲಕ್ಷ್ಮೀದೇವಿ, ರಾಜಮ್ಮ, ಲೋಕೇಶ್ವರಿ, ಗೌರಮ್ಮ, ತಿಮ್ಮಕ್ಕ, ಅಂಜನಮ್ಮ, ಲಾಲು, ರಾಜಮ್ಮ, ಅನುಸೂಯ, ಮುನಿರತ್ನ, ಮುಂತಾದವರು ಭಾಗವಹಿಸಿದ್ದರು

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

1 hour ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

11 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

22 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

23 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago