ಎರಡನೇ ಬಾರಿ ಅಮೇರಿಕಾ ಅಧ್ಯಕ್ಷ ಪಟ್ಟಕ್ಕೇರಲಿರುವ ಡೊನಾಲ್ಡ್ ಟ್ರಂಪ್: ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.

‘ನಿಮ್ಮ ಹಿಂದಿನ ಅವಧಿಯ ಯಶಸ್ಸಿನಂತೆಯೇ ಭಾರತ-ಅಮೆರಿಕ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಿಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ಇಂದು ತಮ್ಮ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲೆಕ್ಟೋರಲ್ ಕಾಲೇಜ್ ಮತಗಳ ಎಣಿಕೆ ನಡೆಯುತ್ತಿದ್ದು, ಒಟ್ಟು 538 ಎಲೆಕ್ಟೋರಲ್ ಮತಗಳ ಪೈಕಿ ಬಹುತಮಕ್ಕೆ 270 ಮತಗಳ ಅಗತ್ಯವಿದೆ. ಟ್ರಂಪ್ ಅವರು ಈಗಾಗಲೇ 270 ಮತಗಳನ್ನು ಪಡೆಯುವ ಮೂಲಕ ಮ್ಯಾಜಿಕ್ ನಂಬರ್ ತಲುಪಿದ್ದಾರೆ. ಇನ್ನು ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಕೂಡ ಸ್ಪರ್ಧೆಯಲ್ಲಿದ್ದು, ಇಲ್ಲಿಯವರೆಗೆ 224 ಮತಗಳನ್ನು ಪಡೆದಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago