ಎರಡು ಚಿರತೆಗಳು ಏಕಾಏಕಿ ಹಸು ಮೇಲೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನಡೆದಿದೆ.
ಹಿರೇಮುದ್ದೇನಹಳ್ಳಿ ಗ್ರಾಮದ ರೈತ ಗಂಗಾರೆಡ್ಡಿ ಎಂಬುವವರ ಹಸುವನ್ನು ಬಲಿ ಪಡೆದಿರುವ ಚಿರತೆಗಳು. ಗ್ರಾಮದ ಹೊರವಲಯದ ಕಾಡಿನಲ್ಲಿ ಹಸುಗಳನ್ನು ಮೇಯಿಸಲು ಬಿಟ್ಟಿದ್ದ ವೇಳೆ ಎರಡು ಚಿರತೆಗಳು ಹಸುವಿನ ಮೇಲೆ ದಾಳಿ ನಡೆಸಿವೆ. ಸ್ಥಳದಲ್ಲಿದ್ದ ರೈತ ಘಟನೆಯನ್ನು ನೋಡಿ ಕೂಗಿಕೊಳ್ಳುತ್ತಿದ್ದಂತೆ ಚಿರತೆಗಳು ಹಸುವನ್ನು ಬಿಟ್ಟು ಕಾಲ್ಕಿತ್ತಿವೆ.
ತೂಬಗೆರೆ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಉಪಟಳ ಹೆಚ್ಚಾಗಿದ್ದು, ರೈತರು ಹಾಗೂ ಜಾನುವಾರು ಸಾಕಣೆದಾರರು ಭಯದ ವಾತವರಣದಲ್ಲಿ ಜೀವನ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಚಿರತೆ ಸೆರೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…