ಎರಡು ಠಾಣಾ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ 125 ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ ಸಾವು: 350 ಕ್ಕೂ ಹೆಚ್ಚು ಜನರಿಗೆ ಗಾಯ: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆಗಾಗಿ ಸಾರ್ವಜನಿಕರ ಆಗ್ರಹ

ರಾಜ್ಯ ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ದೊಡ್ಡಬಳ್ಳಾಪುರದಿಂದ ಹಿಂದೂಪುರ-ಯಲಹಂಕ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ-9, ದಾಬಸ್ ಪೇಟೆ-ಹೊಸಕೋಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-248 ಹಾದು ಹೋಗುತ್ತವೆ. ಇದಲ್ಲದೇ ದೇವನಹಳ್ಳಿ, ನೆಲಮಂಗಲ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ಗೌರಿಬಿದನೂರು ಹೀಗೆ ನಾನಾ ಜಿಲ್ಲೆ, ತಾಲೂಕು, ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಾವಿರಾರು ವಾಹನಗಳು ಇಲ್ಲಿದಂಲೇ ಹಾದು ಹೋಗುತ್ತವೆ.

ಅದೇರೀತಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದ್ದು, ಕಾರ್ಖಾನೆಗಳಲ್ಲಿ ಕೆಲಸ‌ ಮಾಡಲು ಲಕ್ಷಾಂತರ‌ ಜನ ಕಾರ್ಮಿಕರು ಬಂದು ಹೋಗುತ್ತಾರೆ.

ಈ ಹಿನ್ನೆಲೆ ನಗರದಲ್ಲಿ ಜನದಟ್ಟಣೆ, ವಾಹನ ದಟ್ಟಣೆ ಜೊತೆಗೆ ಅಪಘಾತಗಳ ಸಂಖ್ಯೆಯ ಪ್ರಮಾಣವು ಹೆಚ್ಚಾಗುತ್ತಿವೆ. ಕಳೆದ ವರ್ಷ 2024ರಿಂದ ಇಲ್ಲಿಯವರೆಗೆ ಅಪಘಾತಗಳಿಂದ ಸಾವು-ನೋವಿನ ಅಂಕಿಅಂಶಗಳನ್ನು ನೋಡಿದರೆ ಬೆಚ್ಚಿಬೀಳುವುದಂತು ಖಚಿತ. ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂವಿಸಿದ ಅಪಘಾತದಲ್ಲಿ ಕೇವಲ ಒಂದು ವರ್ಷದಲ್ಲಿ 125ಕ್ಕೂ ಹೆಚ್ಚು ಜನ ಸಾವನಪ್ಪಿದ್ದು, 350ಕ್ಕೂ ಹೆಚ್ಚು ಜನ ಕೈ ಕಾಲು ಮುರಿದುಕೊಂಡು ಗಾಯಗೊಂಡಿದ್ದಾರೆ.

ಕೇವಲ ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾತ್ರ ಇಷ್ಟು ಜನ ಸಾವನಪ್ಪಿದ್ದಾರೆ. ಇದಕ್ಕೆ ಮೂಲ ಕಾರಣ ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲನೆ ಮಾಡದೆ ಇರುವುದರ‌ ಜೊತೆಗೆ ಅವೈಜ್ಞಾನಿಕ ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರೆ ಕಾರಣಗಳು.

ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು ನಾಲ್ಕು ತಾಲೂಕುಗಳಿವೆ. ದೊಡ್ಡಬಳ್ಳಾಪುರ ಹೊರತುಪಡಿಸಿ ಉಳಿದ ಮೂರು ತಾಲೂಕಿನಲ್ಲಿಯೂ ಸಂಚಾರಿ ಪೊಲೀಸ್ ಠಾಣೆಗಳಿವೆ. ಸದ್ಯಕ್ಕೆ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಇರುವುದು ಟಿಬಿ ಸರ್ಕಲ್ ಬಳಿ ಮಾತ್ರ. ಹಾಗಾಗಿ ಜನರು ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದಾರೆ. ಅವರು ಸಾಯುವುದು ಅಲ್ಲದೆ,‌ ಬೇರೆಯವರ ಜೀವಕ್ಕೂ ಕುತ್ತು ತರುತ್ತಿದ್ದಾರೆ. ಹಾಗಾಗಿ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಸಬೇಕು ಎಂದು ಜನ ಒತ್ತಾಯಿಸಿದ್ದಾರೆ.

ಅಪಘಾತಗಳಲ್ಲಿ ಮೃತಪಡುವವರ ಪ್ರಮಾಣ ಭಾರಿ ಪ್ರಮಾಣದ ಏರಿಕೆ ಕಂಡಿದೆ. ಬಹುತೇಕ ರಸ್ತೆ ಅಪಘಾತಗಳಿಗೆ ಚಾಲಕನ ಲೋಪವೇ ಪ್ರಮುಖ ಕಾರಣ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೇಳಿದೆ.

ನಗರ ಪ್ರದೇಶದ ರಸ್ತೆಗಳು, ಗ್ರಾಮೀಣ ರಸ್ತೆಗಳು, ರಾಜ್ಯ ಹೆದ್ದಾರಿಗಳು, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ ಹೆದ್ದಾರಿಗಳಲ್ಲಿ ವೇಗಮಿತಿ ಇದೆ. ವೇಗಮಿತಿ ಜಾರಿಯಲ್ಲಿದ್ದೂ ಅದನ್ನು ಮೀರಿದ ವೇಗದಲ್ಲಿ ವಾಹನ ಚಲಾಯಿಸಿದ್ದರಿಂದ ಈ ಅಪಘಾತಗಳು ಸಂಭವಿಸಿವೆ. ಇಂತಹ ಅಪಘಾತಗಳನ್ನು ಚಾಲಕನ ಲೋಪದಿಂದ ಸಂಭವಿಸಿದ್ದು ಎಂದೇ ಪರಿಗಣಿಸಲಾಗುತ್ತಿದೆ.

ಅತಿವೇಗದ ಚಾಲನೆಯ ಹೊರತಾಗಿ ರಸ್ತೆ ಅಪಘಾತಗಳಿಗೆ ಕಾರಣವಾದ ಎರಡನೇ ಅಂಶವೆಂದರೆ ಪಥ ಶಿಸ್ತು ಇಲ್ಲದಿರುವುದು ಹಾಗೂ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡುವುದು.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದು ಅಪಘಾತಕ್ಕೆ ಆಹ್ವಾನ ನೀಡಿದಂತೆ. ಅತಿವೇಗ, ಪಥ ಶಿಸ್ತು ಇಲ್ಲದಿರುವುದು, ವಿರುದ್ಧ ದಿಕ್ಕಿನಲ್ಲಿ ಚಾಲನೆ, ಮದ್ಯಪಾನ ಮಾಡಿ ಚಾಲನೆ ಮಾಡುವುದು ಮತ್ತು ಚಾಲನೆ ವೇಳೆ ಮೊಬೈಲ್‌ ಬಳಸುವುದು… ಇವೆಲ್ಲವನ್ನೂ ಸಂಚಾರ ನಿಯಮಗಳ ಪ್ರಕಾರ ದಂಡಾರ್ಹ ಅಪರಾಧ ಎಂದು ಪರಿಗಣಿಸಲಾಗಿದೆ.

ದ್ವಿಚಕ್ರ ವಾಹನಗಳ ಚಾಲನೆ ವೇಳೆ ಸವಾರ ಮತ್ತು ಹಿಂಬದಿಯ ಸವಾರ ಹೆಲ್ಮೆಟ್‌ ಧರಿಸುವುದು ಕಡ್ಡಾಯ. ಆದರೆ, ದೇಶದ ಕೆಲವು ನಗರಗಳಲ್ಲಷ್ಟೇ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಬಹುತೇಕ ಕಡೆ ಈ ನಿಯಮ ಜಾರಿಯಲ್ಲಿಯೂ ಇಲ್ಲ. ಆದರೆ, ಪ್ರಸ್ತುತ ಸಂಭವಿಸುತ್ತಿರುವ ಅಪಘಾತಗಳಲ್ಲಿ ಹೆಲ್ಮೆಟ್‌ ಧರಿಸಿದೇ ಇದ್ದ ಕಾರಣಕ್ಕೇ ಹೆಚ್ಚು ಜನರು ಮೃತರಾಗುತ್ತಿದ್ದಾರೆ.

ದ್ವಿಚಕ್ರ ವಾಹನ ಚಾಲನೆ ವೇಳೆ ಅಪಘಾತ ಸಂಭವಿಸಿದರೆ ಹೆಚ್ಚು ಪೆಟ್ಟು ಬೀಳುವುದು ತಲೆಗೆ. ಸುರಕ್ಷಿತವಾದ ಮತ್ತು ಸರಿಯಾದ ಅಳತೆಯ ಹೆಲ್ಮೆಟ್‌ಗಳನ್ನ ಕಡ್ಡಾಯವಾಗಿ ಧರಿಸಿದರೆ ತಲೆಗೆ ಪೆಟ್ಟಾಗುವುದನ್ನು ತಡೆಯಬಹುದು.

ಕಾರುಗಳಲ್ಲಿ ಚಾಲಕ ಮತ್ತು ಎಲ್ಲಾ ಪ್ರಯಾಣಿಕರೂ ಸೀಟ್‌ಬೆಲ್ಟ್‌ ಧರಿಸುವುದು ಕಡ್ಡಾಯ. ಬೆಂಗಳೂರಿನಂತಹ ನಗರದಲ್ಲೂ ಚಾಲಕ ಸೀಟ್‌ಬೆಲ್ಟ್‌ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆಯಷ್ಟೇ ಹೊರತು, ಪ್ರಯಾಣಿಕರು ಸೀಟ್‌ಬೆಲ್ಟ್‌ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿಲ್ಲ. ಅಪಘಾತದ ಸಂದರ್ಭದಲ್ಲಿ ಚಾಲಕನಿಗೆ ಮತ್ತು ಪ್ರಯಾಣಿಕನಿಗೆ ಪೆಟ್ಟಾಗದಂತೆ ನೋಡಿಕೊಳ್ಳುವ ಮತ್ತು ಆ ಮೂಲಕ ಪ್ರಾಣಾಪಾಯವನ್ನು ದೂರಮಾಡುವ ಪ್ರಾಥಮಿಕ ಸಾಧನ ಸೀಟ್‌ಬೆಲ್ಟ್‌. ಹೀಗಾಗಿ ಸೀಟ್‌ಬೆಲ್ಟ್‌ ಅನ್ನು ಧರಿಸಲೇಬೇಕು.

ಕಾರುಗಳಲ್ಲಿ ಎಷ್ಟೇ ಏರ್‌ಬ್ಯಾಗ್‌ಗಳಿದ್ದರೂ, ಸೀಟ್‌ಬೆಲ್ಟ್‌ ಧರಿಸದೇ ಇದ್ದರೆ ಅವು ಪ್ರಾಣಾಪಾಯದಿಂದ ಪಾರು ಮಾಡಲಾರವು.

ವಾಹನ ಚಾಲನೆ ವೇಳೆ ಮೊಬೈಲ್‌ ಬಳಸುವುದರಿಂದ ಏಕಾಗ್ರತೆ ಹೋಗಿ, ಅಪಘಾತ ಸಂಭವಿಸುವ ಅಪಾಯವೂ ಇರುತ್ತದೆ. ಹೀಗಾಗಿಯೇ ಚಾಲನೆ ವೇಳೆ ಮೊಬೈಲ್‌ ಬಳಕೆಯನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸುತ್ತಿರುವುದರಿಂದಲೇ ಹಲವು ಅಪಘಾತಗಳು ಸಂಭವಿಸುತ್ತಿವೆ.

ಜೊತೆಗೆ ಅತಿವೇಗ, ಅವಸರದ ಚಾಲನೆ, ಚಾಲನಾ ತರಬೇತಿ ಇಲ್ಲದೇ ವಾಹನ ಚಾಲನೆ, ಸ್ವಯಂ ಅಪಘಾತ, ತ್ರಿಬಲ್ ರೈಡಿಂಗ್, ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು, ತಾಂತ್ರಿಕ ದೋಷ, ಹವಾಮಾನ ವೈಪರಿತ್ಯ, ರಸ್ತೆ ಗುಂಡಿ, ಅವೈಜ್ಞಾನಿಕ ತಿರುವು ನಿರ್ಮಾಣ, ಅಡ್ಡಾದಿಡ್ಡಿ‌ ವಾಹನ ಚಲಾಯಿಸುವಿಕೆ, ಒನ್ ವೇನಲ್ಲಿ ಅಡ್ಡ ಬರುವುದು, ವಾಹನ ಪರವಾನಗಿ ಇಲ್ಲದೇ ಬೇರೊಬ್ಬರ ವಾಹನ ಚಲಾಯಿಸುವುದು ಸೇರಿದಂತೆ ಇತರೆ ಕಾರಣಗಳಿಂದಾಗಿ ಅಪಘಾತಗಳು ಸಂಭವಿಸಿ ಸಾಕಷ್ಟು ಸಾವು ನೋವು ಆಗುತ್ತಿವೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago