ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು, ವೈಟ್‌ ಫೀಲ್ದ್‌ : ಕಳೆದ ಎರಡು ತಿಂಗಳಿನಿಂದ 71 ವರ್ಷದ ಮಹಿಳೆಗೆ ಪ್ರತೀ ಬಾರಿ ಮೂತ್ರ ವಿಸರ್ಜನೆ ಮಾಡುವಾಗ ರಕ್ತ ಬರುತ್ತಿರುವುದನ್ನು ಕಂಡು ಭಯದಲ್ಲಿ ಬದುಕುತ್ತಿದ್ದರು. ಶರೀರ ದುರ್ಬಲವಾಗುತ್ತಿತ್ತು, ರಕ್ತದ ಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿತ್ತು. ಆಸ್ಪತ್ರೆಗೆ ಬಂದಾಗ ಅವರ ಹಿಮೋಗ್ಲೋಬಿನ್ ಕೇವಲ 5 ಗ್ರಾಂ/dl ಇತ್ತು. ಕುಟುಂಬದವರು ಬೆಚ್ಚಿಬಿದ್ದರು – “ಇನ್ನೆಷ್ಟು ದಿನ ಬದುಕುತ್ತಾರೆ?” ಎಂಬ ಭಯ ಅವರ ಕಣ್ಣಲ್ಲಿ ಕಾಣಿಸುತ್ತಿತ್ತು.

ಬಳಿಕೆ ಮಡಿಕವರ್‌ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞ ಡಾ ದಿಲೀಪ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದರು . ಸಿಟಿ ಸ್ಕ್ಯಾನ್ ಮಾಡಿದಾಗ ಎಡ ಕಿಡ್ನಿಯಲ್ಲಿ 20 ಸೆಂ.ಮೀ ಗಾತ್ರದ ಟ್ಯೂಮರ್‌ ಇರೋದು ಪತ್ತೆಯಾಯಿತು. ವೈದ್ಯರು ಇದನ್ನು ಕಿಡ್ನಿ ಟ್ಯೂಮರ್‌ ಎಂದು ಧೃಢಪಡಿಸಿದರು. ಇಳಿ ವಯಸ್ಸಿನಲ್ಲಿ, ಅವರ ಆರೋಗ್ಯ ಕೂಡ ಅಷ್ಟೊಂದು ಪ್ರಬಲವಾಗಿರಲಿಲ್ಲ. ಅಲ್ಲದೇ ಟ್ಯೂಮರ್ ತೆಗೆದು ಹಾಕದೇ ಇದ್ದಿದ್ದರೆ ಜೀವಕ್ಕೆ ಅಪಾಯವಾಗಿತ್ತು.

ಹಾಗಾಗೀ ಸಾಂಪ್ರಾದಾಯಿಕ ಶಸ್ತ್ರಚಿಕಿತ್ಸೆ ಮಾಡದೇ, ರೋಬೊಟಿಕ್‌ ಮೂಲಕ ಆಪರೇಷನ್‌ ಮಾಡಿ ದೊಡ್ಡ ಗಾತ್ರದ ಟ್ಯೂಮರ್‌ ಅನ್ನು ತೆಗೆದು ಹಾಕಲಾಗಿದೆ. ಸರ್ಜರಿ ಬಳಿಕ ಮಾತನಾಡಿದ ಯೂರೋಲೋಜಿಸ್ಟ್‌ ಡಾ ದಿಲೀಪ್‌ ,
“ಇದು ಅತಿ ಅಪಾಯಕಾರಿ ಪ್ರಕರಣವಾಗಿತ್ತು. ರೋಗಿಯ ವಯಸ್ಸು, ಹೆಚ್ಚು ರಕ್ತಹೀನತೆ ಹಾಗೂ ಭಾರಿ ಗಡ್ಡೆ – ಇವುಗಳೊಂದಿಗೆ ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆ ಮಾಡಿದರೇ ಚೇತರಿಕೆ ಕಷ್ಟವಾಗ್ತಾ ಇತ್ತು . ಆದರೆ ರೋಬೋಟಿಕ್ ತಂತ್ರಜ್ಞಾನ ನಮಗೆ ಭರವಸೆ ನೀಡಿತು. ನಿಖರವಾಗಿ, ಸುರಕ್ಷಿತವಾಗಿ ಟ್ಯೂಮರ್‌ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಾಯಿತು.”

ಕುಟುಂಬದವರು ಕಣ್ಣೀರಿನಿಂದ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು:
“ನಾವು ಅವರನ್ನ ಕಳೆದುಕೊಳ್ಳುತ್ತೇವೆ ಎಂದುಕೊಂಡಿದ್ದೆವು. ಪ್ರತಿದಿನ ಅವರ ಆರೋಗ್ಯ ಹದಗೆಡುತ್ತಿತ್ತು. ಆದರೆ ಈ ಶಸ್ತ್ರಚಿಕಿತ್ಸೆ ಅವರಿಗೆ ಹೊಸ ಜೀವನ ಕೊಟ್ಟಿದೆ. ವೈದ್ಯರಿಗೆ ಮತ್ತು ಮೆಡಿಕವರ್ ಆಸ್ಪತ್ರೆಗೆ ನಮ್ಮ ಹೃದಯಪೂರ್ವಕ ಧನ್ಯವಾದಗಳು.”

ಪ್ರಸ್ತುತ ಅವರು ಸ್ಥಿರ ಆರೋಗ್ಯ ಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಹೇಳುವಂತೆ, ರೋಬೋಟಿಕ್ ಶಸ್ತ್ರಚಿಕಿತ್ಸೆ ಇಂತಹ ಸಂಕೀರ್ಣ ಪ್ರಕರಣಗಳಲ್ಲಿ ಜೀವ ಉಳಿಸುವ ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಕಡಿಮೆ ರಕ್ತಸ್ರಾವ, ಚಿಕ್ಕ ಕತ್ತರಿಕೆ, ವೇಗವಾದ ಚೇತರಿಕೆ ಮತ್ತು ಉತ್ತಮ ಫಲಿತಾಂಶ – ಇವುಗಳ ಮೂಲಕ ವಯೋವೃದ್ಧರಿಗೆ ಇದು ಅಮೂಲ್ಯವಾದ ವರದಾನ.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

13 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

15 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

15 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

17 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago