ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು, ವೈಟ್‌ ಫೀಲ್ದ್‌ : ಕಳೆದ ಎರಡು ತಿಂಗಳಿನಿಂದ 71 ವರ್ಷದ ಮಹಿಳೆಗೆ ಪ್ರತೀ ಬಾರಿ ಮೂತ್ರ ವಿಸರ್ಜನೆ ಮಾಡುವಾಗ ರಕ್ತ ಬರುತ್ತಿರುವುದನ್ನು ಕಂಡು ಭಯದಲ್ಲಿ ಬದುಕುತ್ತಿದ್ದರು. ಶರೀರ ದುರ್ಬಲವಾಗುತ್ತಿತ್ತು, ರಕ್ತದ ಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿತ್ತು. ಆಸ್ಪತ್ರೆಗೆ ಬಂದಾಗ ಅವರ ಹಿಮೋಗ್ಲೋಬಿನ್ ಕೇವಲ 5 ಗ್ರಾಂ/dl ಇತ್ತು. ಕುಟುಂಬದವರು ಬೆಚ್ಚಿಬಿದ್ದರು – “ಇನ್ನೆಷ್ಟು ದಿನ ಬದುಕುತ್ತಾರೆ?” ಎಂಬ ಭಯ ಅವರ ಕಣ್ಣಲ್ಲಿ ಕಾಣಿಸುತ್ತಿತ್ತು.

ಬಳಿಕೆ ಮಡಿಕವರ್‌ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞ ಡಾ ದಿಲೀಪ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದರು . ಸಿಟಿ ಸ್ಕ್ಯಾನ್ ಮಾಡಿದಾಗ ಎಡ ಕಿಡ್ನಿಯಲ್ಲಿ 20 ಸೆಂ.ಮೀ ಗಾತ್ರದ ಟ್ಯೂಮರ್‌ ಇರೋದು ಪತ್ತೆಯಾಯಿತು. ವೈದ್ಯರು ಇದನ್ನು ಕಿಡ್ನಿ ಟ್ಯೂಮರ್‌ ಎಂದು ಧೃಢಪಡಿಸಿದರು. ಇಳಿ ವಯಸ್ಸಿನಲ್ಲಿ, ಅವರ ಆರೋಗ್ಯ ಕೂಡ ಅಷ್ಟೊಂದು ಪ್ರಬಲವಾಗಿರಲಿಲ್ಲ. ಅಲ್ಲದೇ ಟ್ಯೂಮರ್ ತೆಗೆದು ಹಾಕದೇ ಇದ್ದಿದ್ದರೆ ಜೀವಕ್ಕೆ ಅಪಾಯವಾಗಿತ್ತು.

ಹಾಗಾಗೀ ಸಾಂಪ್ರಾದಾಯಿಕ ಶಸ್ತ್ರಚಿಕಿತ್ಸೆ ಮಾಡದೇ, ರೋಬೊಟಿಕ್‌ ಮೂಲಕ ಆಪರೇಷನ್‌ ಮಾಡಿ ದೊಡ್ಡ ಗಾತ್ರದ ಟ್ಯೂಮರ್‌ ಅನ್ನು ತೆಗೆದು ಹಾಕಲಾಗಿದೆ. ಸರ್ಜರಿ ಬಳಿಕ ಮಾತನಾಡಿದ ಯೂರೋಲೋಜಿಸ್ಟ್‌ ಡಾ ದಿಲೀಪ್‌ ,
“ಇದು ಅತಿ ಅಪಾಯಕಾರಿ ಪ್ರಕರಣವಾಗಿತ್ತು. ರೋಗಿಯ ವಯಸ್ಸು, ಹೆಚ್ಚು ರಕ್ತಹೀನತೆ ಹಾಗೂ ಭಾರಿ ಗಡ್ಡೆ – ಇವುಗಳೊಂದಿಗೆ ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆ ಮಾಡಿದರೇ ಚೇತರಿಕೆ ಕಷ್ಟವಾಗ್ತಾ ಇತ್ತು . ಆದರೆ ರೋಬೋಟಿಕ್ ತಂತ್ರಜ್ಞಾನ ನಮಗೆ ಭರವಸೆ ನೀಡಿತು. ನಿಖರವಾಗಿ, ಸುರಕ್ಷಿತವಾಗಿ ಟ್ಯೂಮರ್‌ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಾಯಿತು.”

ಕುಟುಂಬದವರು ಕಣ್ಣೀರಿನಿಂದ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು:
“ನಾವು ಅವರನ್ನ ಕಳೆದುಕೊಳ್ಳುತ್ತೇವೆ ಎಂದುಕೊಂಡಿದ್ದೆವು. ಪ್ರತಿದಿನ ಅವರ ಆರೋಗ್ಯ ಹದಗೆಡುತ್ತಿತ್ತು. ಆದರೆ ಈ ಶಸ್ತ್ರಚಿಕಿತ್ಸೆ ಅವರಿಗೆ ಹೊಸ ಜೀವನ ಕೊಟ್ಟಿದೆ. ವೈದ್ಯರಿಗೆ ಮತ್ತು ಮೆಡಿಕವರ್ ಆಸ್ಪತ್ರೆಗೆ ನಮ್ಮ ಹೃದಯಪೂರ್ವಕ ಧನ್ಯವಾದಗಳು.”

ಪ್ರಸ್ತುತ ಅವರು ಸ್ಥಿರ ಆರೋಗ್ಯ ಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಹೇಳುವಂತೆ, ರೋಬೋಟಿಕ್ ಶಸ್ತ್ರಚಿಕಿತ್ಸೆ ಇಂತಹ ಸಂಕೀರ್ಣ ಪ್ರಕರಣಗಳಲ್ಲಿ ಜೀವ ಉಳಿಸುವ ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಕಡಿಮೆ ರಕ್ತಸ್ರಾವ, ಚಿಕ್ಕ ಕತ್ತರಿಕೆ, ವೇಗವಾದ ಚೇತರಿಕೆ ಮತ್ತು ಉತ್ತಮ ಫಲಿತಾಂಶ – ಇವುಗಳ ಮೂಲಕ ವಯೋವೃದ್ಧರಿಗೆ ಇದು ಅಮೂಲ್ಯವಾದ ವರದಾನ.

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

38 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

6 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

8 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

23 hours ago