ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು, ವೈಟ್‌ ಫೀಲ್ದ್‌ : ಕಳೆದ ಎರಡು ತಿಂಗಳಿನಿಂದ 71 ವರ್ಷದ ಮಹಿಳೆಗೆ ಪ್ರತೀ ಬಾರಿ ಮೂತ್ರ ವಿಸರ್ಜನೆ ಮಾಡುವಾಗ ರಕ್ತ ಬರುತ್ತಿರುವುದನ್ನು ಕಂಡು ಭಯದಲ್ಲಿ ಬದುಕುತ್ತಿದ್ದರು. ಶರೀರ ದುರ್ಬಲವಾಗುತ್ತಿತ್ತು, ರಕ್ತದ ಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿತ್ತು. ಆಸ್ಪತ್ರೆಗೆ ಬಂದಾಗ ಅವರ ಹಿಮೋಗ್ಲೋಬಿನ್ ಕೇವಲ 5 ಗ್ರಾಂ/dl ಇತ್ತು. ಕುಟುಂಬದವರು ಬೆಚ್ಚಿಬಿದ್ದರು – “ಇನ್ನೆಷ್ಟು ದಿನ ಬದುಕುತ್ತಾರೆ?” ಎಂಬ ಭಯ ಅವರ ಕಣ್ಣಲ್ಲಿ ಕಾಣಿಸುತ್ತಿತ್ತು.

ಬಳಿಕೆ ಮಡಿಕವರ್‌ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞ ಡಾ ದಿಲೀಪ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದರು . ಸಿಟಿ ಸ್ಕ್ಯಾನ್ ಮಾಡಿದಾಗ ಎಡ ಕಿಡ್ನಿಯಲ್ಲಿ 20 ಸೆಂ.ಮೀ ಗಾತ್ರದ ಟ್ಯೂಮರ್‌ ಇರೋದು ಪತ್ತೆಯಾಯಿತು. ವೈದ್ಯರು ಇದನ್ನು ಕಿಡ್ನಿ ಟ್ಯೂಮರ್‌ ಎಂದು ಧೃಢಪಡಿಸಿದರು. ಇಳಿ ವಯಸ್ಸಿನಲ್ಲಿ, ಅವರ ಆರೋಗ್ಯ ಕೂಡ ಅಷ್ಟೊಂದು ಪ್ರಬಲವಾಗಿರಲಿಲ್ಲ. ಅಲ್ಲದೇ ಟ್ಯೂಮರ್ ತೆಗೆದು ಹಾಕದೇ ಇದ್ದಿದ್ದರೆ ಜೀವಕ್ಕೆ ಅಪಾಯವಾಗಿತ್ತು.

ಹಾಗಾಗೀ ಸಾಂಪ್ರಾದಾಯಿಕ ಶಸ್ತ್ರಚಿಕಿತ್ಸೆ ಮಾಡದೇ, ರೋಬೊಟಿಕ್‌ ಮೂಲಕ ಆಪರೇಷನ್‌ ಮಾಡಿ ದೊಡ್ಡ ಗಾತ್ರದ ಟ್ಯೂಮರ್‌ ಅನ್ನು ತೆಗೆದು ಹಾಕಲಾಗಿದೆ. ಸರ್ಜರಿ ಬಳಿಕ ಮಾತನಾಡಿದ ಯೂರೋಲೋಜಿಸ್ಟ್‌ ಡಾ ದಿಲೀಪ್‌ ,
“ಇದು ಅತಿ ಅಪಾಯಕಾರಿ ಪ್ರಕರಣವಾಗಿತ್ತು. ರೋಗಿಯ ವಯಸ್ಸು, ಹೆಚ್ಚು ರಕ್ತಹೀನತೆ ಹಾಗೂ ಭಾರಿ ಗಡ್ಡೆ – ಇವುಗಳೊಂದಿಗೆ ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆ ಮಾಡಿದರೇ ಚೇತರಿಕೆ ಕಷ್ಟವಾಗ್ತಾ ಇತ್ತು . ಆದರೆ ರೋಬೋಟಿಕ್ ತಂತ್ರಜ್ಞಾನ ನಮಗೆ ಭರವಸೆ ನೀಡಿತು. ನಿಖರವಾಗಿ, ಸುರಕ್ಷಿತವಾಗಿ ಟ್ಯೂಮರ್‌ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಾಯಿತು.”

ಕುಟುಂಬದವರು ಕಣ್ಣೀರಿನಿಂದ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು:
“ನಾವು ಅವರನ್ನ ಕಳೆದುಕೊಳ್ಳುತ್ತೇವೆ ಎಂದುಕೊಂಡಿದ್ದೆವು. ಪ್ರತಿದಿನ ಅವರ ಆರೋಗ್ಯ ಹದಗೆಡುತ್ತಿತ್ತು. ಆದರೆ ಈ ಶಸ್ತ್ರಚಿಕಿತ್ಸೆ ಅವರಿಗೆ ಹೊಸ ಜೀವನ ಕೊಟ್ಟಿದೆ. ವೈದ್ಯರಿಗೆ ಮತ್ತು ಮೆಡಿಕವರ್ ಆಸ್ಪತ್ರೆಗೆ ನಮ್ಮ ಹೃದಯಪೂರ್ವಕ ಧನ್ಯವಾದಗಳು.”

ಪ್ರಸ್ತುತ ಅವರು ಸ್ಥಿರ ಆರೋಗ್ಯ ಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಹೇಳುವಂತೆ, ರೋಬೋಟಿಕ್ ಶಸ್ತ್ರಚಿಕಿತ್ಸೆ ಇಂತಹ ಸಂಕೀರ್ಣ ಪ್ರಕರಣಗಳಲ್ಲಿ ಜೀವ ಉಳಿಸುವ ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಕಡಿಮೆ ರಕ್ತಸ್ರಾವ, ಚಿಕ್ಕ ಕತ್ತರಿಕೆ, ವೇಗವಾದ ಚೇತರಿಕೆ ಮತ್ತು ಉತ್ತಮ ಫಲಿತಾಂಶ – ಇವುಗಳ ಮೂಲಕ ವಯೋವೃದ್ಧರಿಗೆ ಇದು ಅಮೂಲ್ಯವಾದ ವರದಾನ.

Ramesh Babu

Journalist

Recent Posts

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

1 minute ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

16 minutes ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

32 minutes ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

36 minutes ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

1 hour ago

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

3 hours ago