ಎರಡು ತಿಂಗಳು ಮೂತ್ರದಲ್ಲಿ ರಕ್ತ – ಜೀವಕ್ಕೆ ಅಪಾಯವಾಗಿದ್ದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು, ವೈಟ್‌ ಫೀಲ್ದ್‌ : ಕಳೆದ ಎರಡು ತಿಂಗಳಿನಿಂದ 71 ವರ್ಷದ ಮಹಿಳೆಗೆ ಪ್ರತೀ ಬಾರಿ ಮೂತ್ರ ವಿಸರ್ಜನೆ ಮಾಡುವಾಗ ರಕ್ತ ಬರುತ್ತಿರುವುದನ್ನು ಕಂಡು ಭಯದಲ್ಲಿ ಬದುಕುತ್ತಿದ್ದರು. ಶರೀರ ದುರ್ಬಲವಾಗುತ್ತಿತ್ತು, ರಕ್ತದ ಮಟ್ಟ ಅಪಾಯಕಾರಿಯಾಗಿ ಕುಸಿಯುತ್ತಿತ್ತು. ಆಸ್ಪತ್ರೆಗೆ ಬಂದಾಗ ಅವರ ಹಿಮೋಗ್ಲೋಬಿನ್ ಕೇವಲ 5 ಗ್ರಾಂ/dl ಇತ್ತು. ಕುಟುಂಬದವರು ಬೆಚ್ಚಿಬಿದ್ದರು – “ಇನ್ನೆಷ್ಟು ದಿನ ಬದುಕುತ್ತಾರೆ?” ಎಂಬ ಭಯ ಅವರ ಕಣ್ಣಲ್ಲಿ ಕಾಣಿಸುತ್ತಿತ್ತು.

ಬಳಿಕೆ ಮಡಿಕವರ್‌ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞ ಡಾ ದಿಲೀಪ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದರು . ಸಿಟಿ ಸ್ಕ್ಯಾನ್ ಮಾಡಿದಾಗ ಎಡ ಕಿಡ್ನಿಯಲ್ಲಿ 20 ಸೆಂ.ಮೀ ಗಾತ್ರದ ಟ್ಯೂಮರ್‌ ಇರೋದು ಪತ್ತೆಯಾಯಿತು. ವೈದ್ಯರು ಇದನ್ನು ಕಿಡ್ನಿ ಟ್ಯೂಮರ್‌ ಎಂದು ಧೃಢಪಡಿಸಿದರು. ಇಳಿ ವಯಸ್ಸಿನಲ್ಲಿ, ಅವರ ಆರೋಗ್ಯ ಕೂಡ ಅಷ್ಟೊಂದು ಪ್ರಬಲವಾಗಿರಲಿಲ್ಲ. ಅಲ್ಲದೇ ಟ್ಯೂಮರ್ ತೆಗೆದು ಹಾಕದೇ ಇದ್ದಿದ್ದರೆ ಜೀವಕ್ಕೆ ಅಪಾಯವಾಗಿತ್ತು.

ಹಾಗಾಗೀ ಸಾಂಪ್ರಾದಾಯಿಕ ಶಸ್ತ್ರಚಿಕಿತ್ಸೆ ಮಾಡದೇ, ರೋಬೊಟಿಕ್‌ ಮೂಲಕ ಆಪರೇಷನ್‌ ಮಾಡಿ ದೊಡ್ಡ ಗಾತ್ರದ ಟ್ಯೂಮರ್‌ ಅನ್ನು ತೆಗೆದು ಹಾಕಲಾಗಿದೆ. ಸರ್ಜರಿ ಬಳಿಕ ಮಾತನಾಡಿದ ಯೂರೋಲೋಜಿಸ್ಟ್‌ ಡಾ ದಿಲೀಪ್‌ ,
“ಇದು ಅತಿ ಅಪಾಯಕಾರಿ ಪ್ರಕರಣವಾಗಿತ್ತು. ರೋಗಿಯ ವಯಸ್ಸು, ಹೆಚ್ಚು ರಕ್ತಹೀನತೆ ಹಾಗೂ ಭಾರಿ ಗಡ್ಡೆ – ಇವುಗಳೊಂದಿಗೆ ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆ ಮಾಡಿದರೇ ಚೇತರಿಕೆ ಕಷ್ಟವಾಗ್ತಾ ಇತ್ತು . ಆದರೆ ರೋಬೋಟಿಕ್ ತಂತ್ರಜ್ಞಾನ ನಮಗೆ ಭರವಸೆ ನೀಡಿತು. ನಿಖರವಾಗಿ, ಸುರಕ್ಷಿತವಾಗಿ ಟ್ಯೂಮರ್‌ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಾಯಿತು.”

ಕುಟುಂಬದವರು ಕಣ್ಣೀರಿನಿಂದ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು:
“ನಾವು ಅವರನ್ನ ಕಳೆದುಕೊಳ್ಳುತ್ತೇವೆ ಎಂದುಕೊಂಡಿದ್ದೆವು. ಪ್ರತಿದಿನ ಅವರ ಆರೋಗ್ಯ ಹದಗೆಡುತ್ತಿತ್ತು. ಆದರೆ ಈ ಶಸ್ತ್ರಚಿಕಿತ್ಸೆ ಅವರಿಗೆ ಹೊಸ ಜೀವನ ಕೊಟ್ಟಿದೆ. ವೈದ್ಯರಿಗೆ ಮತ್ತು ಮೆಡಿಕವರ್ ಆಸ್ಪತ್ರೆಗೆ ನಮ್ಮ ಹೃದಯಪೂರ್ವಕ ಧನ್ಯವಾದಗಳು.”

ಪ್ರಸ್ತುತ ಅವರು ಸ್ಥಿರ ಆರೋಗ್ಯ ಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಹೇಳುವಂತೆ, ರೋಬೋಟಿಕ್ ಶಸ್ತ್ರಚಿಕಿತ್ಸೆ ಇಂತಹ ಸಂಕೀರ್ಣ ಪ್ರಕರಣಗಳಲ್ಲಿ ಜೀವ ಉಳಿಸುವ ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಕಡಿಮೆ ರಕ್ತಸ್ರಾವ, ಚಿಕ್ಕ ಕತ್ತರಿಕೆ, ವೇಗವಾದ ಚೇತರಿಕೆ ಮತ್ತು ಉತ್ತಮ ಫಲಿತಾಂಶ – ಇವುಗಳ ಮೂಲಕ ವಯೋವೃದ್ಧರಿಗೆ ಇದು ಅಮೂಲ್ಯವಾದ ವರದಾನ.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

30 minutes ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

2 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

2 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

2 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

5 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

8 hours ago