ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ – ತಾಯಿಯ ಕಿಡ್ನಿ ಪ್ರೀತಿಯಿಂದ ಉಳಿಯಿತು ಮಗಳ ಜೀವ
ವೈಟ್ ಫೀಲ್ದ್ ಬೆಂಗಳೂರು – ಬೆಂಗಳೂರು ಮೂಲದ 38 ವರ್ಷದ ಮಹಿಳೆಗೆ ಎರಡನೇ ಬಾರಿಗೆ ಕಿಡ್ನಿಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶ್ವಸಿಯಾಗಿ ಆಕೆಯನ್ನು ಗುಣಮುಖರನ್ನಾಗಿ ಮಾಡಲಾಗಿದೆ.
ಮಹಿಳೆಯೂ ಧೀರ್ಘಕಾಲದ ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಾ ಇದ್ದ ಕಾರಣ 2016 ರಲ್ಲಿ ಆಕೆಯ ತಂದೆಯೇ ಕಿಡ್ನಿ ದಾನ ಮಾಡುವುದರ ಮೂಲಕ ಮೊದಲ ಬಾರಿಗೆ ಯಶಸ್ವಿ ಕಿಡ್ನಿ ಕಸಿ ಮಾಡಲಾಗಿತ್ತು. ಆದಾದ ಬಳಿಕ ಆಕೆಯಲ್ಲಿ ಕಿಡ್ನಿ ಸಂಭಂಧಿತ ಯಾವುದೇ ಸಮಸ್ಯೆಗಳು ಕಂಡು ಬಂದಿರಲಿಲ್ಲ . ಆದರೆ ಕಳೆದ ನವಂಬರ್ ತಿಂಗಳಿನಿಂದ ಆರೋಗ್ಯದಲ್ಲಿ ಸಾಕಷ್ಟು ಏರು ಪೇರು ಕಂಡು ಬಂತು . ತೂಕ ಇಳಿಕೆ, ಊಟ ಸೇರುತ್ತಾ ಇರಲಿಲ್ಲ ಹಾಗೂ ಮಲಬದ್ದತೆ ಸೇರಿದಂತೆ ಹಲವು ರೋಗ ಲಕ್ಷಣಗಳು ಕಾಣಿಸಲಾರಂಭಿಸಿತು.
ಅಲ್ಲದೇ ರಕ್ತ ಪರೀಕ್ಷೆಯಲ್ಲಿ ಕ್ರಿಯಾಟಿನಿನ್ ಮಟ್ಟ ಏರಿಕೆಯಾಗಿದ್ದರಿಂದ ವಾರಕ್ಕೆ ಎರಡು ಬಾರಿ ಹೆಮೊಡಯಾಲಿಸಿಸ್( 2 ಕಿಡ್ನಿ ಫೇಲ್ ಆದಾಗ ಮಾಡುವ ಚಿಕಿತ್ಸೆ) ಮಾಡಲಾಗುತ್ತಾ ಇತ್ತು.
2025ರ ಫೆಬ್ರವರಿಯ ಬಳಿಕ ರೋಗಿಯ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿರುವ ಕಾರಣ ವೈಟ್ ಫೀಲ್ಡ್ ನಲ್ಲಿರುವ ಮೆಡಿಕವರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಮಹಿಳೆಯನ್ನು ದಾಖಲಸಲಾಯಿತು. ಮೂತ್ರಶಾಸ್ತಜ್ಞ ಡಾ. ಪ್ರಮೋದ್ ರವರ ನೇತ್ರತ್ವದಲ್ಲಿ ಎರಡನೇ ಬಾರಿಗೆ ಆಕೆಗೆ ಕಿಡ್ನಿ ಕಸಿ ಮಾಡಲಾಯಿತು. ಈ ಬಾರಿ ಆಕೆಯ ತಾಯಿ ಅವರಿಗೆ ಕಿಡ್ನಿ ದಾನ ಮಾಡಿದ್ದರು. ಸುಮಾರು 3 ಗಂಟೆಗಳ ಕಾಲ ಆಸ್ಪತ್ರೆಯ ನೆಫ್ರೋಲಾಜಿ, ಯೂರೋಲಾಜಿ ಮತ್ತು ಟ್ರಾನ್ಸ್ಪ್ಲಾಂಟ್ ತಜ್ಞರ ತಂಡವು ಉನ್ನತ ತಂತ್ರಜ್ಞಾನ ಬಳಸಿಕೊಂಡು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು. ಶಸ್ತ್ರಚಿಕಿತ್ಸೆಯ 7ನೇ ದಿನಕ್ಕೆ ಕ್ರಿಯಾಟಿನಿನ್ , ಹಿಮೋಗ್ಲೋಬಿನ್ , ಬಿಳಿ ರಕ್ತಕಣಗಳು ಸರಿಯಾಗಿ ಕೆಲಸ ಮಾಡಲು ಶುರು ಮಾಡಿದ್ದ ಕಾರಣ ಮಹಿಳೆಯೂ ಸಂಪೂರ್ಣವಾಗಿ ಗುಣಮುಖರಾಗಿದ್ದರು.
ಮರು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಎಂದರೆ ಸಾಮಾನ್ಯ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗಿಂತ ಹೆಚ್ಚು ಸವಾಲುಭರಿತ. ಈ ರೋಗಿಯು ಹಿಂದೆ ಟ್ರಾನ್ಸ್ಪ್ಲಾಂಟ್ಗೆ ಒಳಗಾಗಿರುವುದರಿಂದ ಶರೀರದ ರಕ್ಷಣಾತ್ಮಕ ವ್ಯವಸ್ಥೆ ಹೆಚ್ಚು ಬಲವಂತವಾಗಿರುತ್ತದೆ. ಆದ್ದರಿಂದ ಔಷಧಿ ನೀಡುವ ಕ್ರಮದಿಂದ ಹಿಡಿದು ಶಸ್ತ್ರಚಿಕಿತ್ಸೆ ತನಕ ಹೆಚ್ಚು ನಿಖರತೆ ಅಗತ್ಯವಿರುತ್ತದೆ ಎಂದು ಶಸ್ತ್ರಚಿಕಿತ್ಸೆಯ ಬಳಿಕ ಡಾ. ಪ್ರಮೋದ್, ಯೂರೋಲೋಜಿಸ್ಟ್ ಮತ್ತು ಟ್ರಾನ್ಸ್ಪ್ಲಾಂಟ್ ಶಸ್ತ್ರಚಿಕಿತ್ಸ ತಜ್ಞ ಸಂತಸ ವ್ಯಕ್ತಪಡಿಸಿದ್ದಾರೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…