Categories: ಆರೋಗ್ಯ

ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ

ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ – ತಾಯಿಯ ಕಿಡ್ನಿ ಪ್ರೀತಿಯಿಂದ ಉಳಿಯಿತು ಮಗಳ ಜೀವ
ವೈಟ್‌ ಫೀಲ್ದ್‌ ಬೆಂಗಳೂರು – ಬೆಂಗಳೂರು ಮೂಲದ 38 ವರ್ಷದ ಮಹಿಳೆಗೆ ಎರಡನೇ ಬಾರಿಗೆ ಕಿಡ್ನಿಕಸಿ ಶಸ್ತ್ರಚಿಕಿತ್ಸೆ ಮಾಡಿ ಯಶ್ವಸಿಯಾಗಿ ಆಕೆಯನ್ನು ಗುಣಮುಖರನ್ನಾಗಿ ಮಾಡಲಾಗಿದೆ.

ಮಹಿಳೆಯೂ ಧೀರ್ಘಕಾಲದ ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಾ ಇದ್ದ ಕಾರಣ 2016 ರಲ್ಲಿ ಆಕೆಯ ತಂದೆಯೇ ಕಿಡ್ನಿ ದಾನ ಮಾಡುವುದರ ಮೂಲಕ ಮೊದಲ ಬಾರಿಗೆ ಯಶಸ್ವಿ ಕಿಡ್ನಿ ಕಸಿ ಮಾಡಲಾಗಿತ್ತು. ಆದಾದ ಬಳಿಕ ಆಕೆಯಲ್ಲಿ ಕಿಡ್ನಿ ಸಂಭಂಧಿತ ಯಾವುದೇ ಸಮಸ್ಯೆಗಳು ಕಂಡು ಬಂದಿರಲಿಲ್ಲ . ಆದರೆ ಕಳೆದ ನವಂಬರ್‌ ತಿಂಗಳಿನಿಂದ ಆರೋಗ್ಯದಲ್ಲಿ ಸಾಕಷ್ಟು ಏರು ಪೇರು ಕಂಡು ಬಂತು . ತೂಕ ಇಳಿಕೆ, ಊಟ ಸೇರುತ್ತಾ ಇರಲಿಲ್ಲ ಹಾಗೂ ಮಲಬದ್ದತೆ ಸೇರಿದಂತೆ ಹಲವು ರೋಗ ಲಕ್ಷಣಗಳು ಕಾಣಿಸಲಾರಂಭಿಸಿತು.

ಅಲ್ಲದೇ ರಕ್ತ ಪರೀಕ್ಷೆಯಲ್ಲಿ ಕ್ರಿಯಾಟಿನಿನ್‌ ಮಟ್ಟ ಏರಿಕೆಯಾಗಿದ್ದರಿಂದ ವಾರಕ್ಕೆ ಎರಡು ಬಾರಿ ಹೆಮೊಡಯಾಲಿಸಿಸ್( 2 ಕಿಡ್ನಿ ಫೇಲ್‌ ಆದಾಗ ಮಾಡುವ ಚಿಕಿತ್ಸೆ) ಮಾಡಲಾಗುತ್ತಾ ಇತ್ತು.

2025ರ ಫೆಬ್ರವರಿಯ ಬಳಿಕ ರೋಗಿಯ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿರುವ ಕಾರಣ ವೈಟ್‌ ಫೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಮಹಿಳೆಯನ್ನು ದಾಖಲಸಲಾಯಿತು. ಮೂತ್ರಶಾಸ್ತಜ್ಞ ಡಾ. ಪ್ರಮೋದ್‌ ರವರ ನೇತ್ರತ್ವದಲ್ಲಿ ಎರಡನೇ ಬಾರಿಗೆ ಆಕೆಗೆ ಕಿಡ್ನಿ ಕಸಿ ಮಾಡಲಾಯಿತು. ಈ ಬಾರಿ ಆಕೆಯ ತಾಯಿ ಅವರಿಗೆ ಕಿಡ್ನಿ ದಾನ ಮಾಡಿದ್ದರು. ಸುಮಾರು 3 ಗಂಟೆಗಳ ಕಾಲ ಆಸ್ಪತ್ರೆಯ ನೆಫ್ರೋಲಾಜಿ, ಯೂರೋಲಾಜಿ ಮತ್ತು ಟ್ರಾನ್ಸ್ಪ್ಲಾಂಟ್ ತಜ್ಞರ ತಂಡವು ಉನ್ನತ ತಂತ್ರಜ್ಞಾನ ಬಳಸಿಕೊಂಡು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು. ಶಸ್ತ್ರಚಿಕಿತ್ಸೆಯ 7ನೇ ದಿನಕ್ಕೆ ಕ್ರಿಯಾಟಿನಿನ್ , ಹಿಮೋಗ್ಲೋಬಿನ್‌ , ಬಿಳಿ ರಕ್ತಕಣಗಳು ಸರಿಯಾಗಿ ಕೆಲಸ ಮಾಡಲು ಶುರು ಮಾಡಿದ್ದ ಕಾರಣ ಮಹಿಳೆಯೂ ಸಂಪೂರ್ಣವಾಗಿ ಗುಣಮುಖರಾಗಿದ್ದರು.

ಮರು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಎಂದರೆ ಸಾಮಾನ್ಯ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗಿಂತ ಹೆಚ್ಚು ಸವಾಲುಭರಿತ. ಈ ರೋಗಿಯು ಹಿಂದೆ ಟ್ರಾನ್ಸ್‌ಪ್ಲಾಂಟ್‌ಗೆ ಒಳಗಾಗಿರುವುದರಿಂದ ಶರೀರದ ರಕ್ಷಣಾತ್ಮಕ ವ್ಯವಸ್ಥೆ ಹೆಚ್ಚು ಬಲವಂತವಾಗಿರುತ್ತದೆ. ಆದ್ದರಿಂದ ಔಷಧಿ ನೀಡುವ ಕ್ರಮದಿಂದ ಹಿಡಿದು ಶಸ್ತ್ರಚಿಕಿತ್ಸೆ ತನಕ ಹೆಚ್ಚು ನಿಖರತೆ ಅಗತ್ಯವಿರುತ್ತದೆ ಎಂದು ಶಸ್ತ್ರಚಿಕಿತ್ಸೆಯ ಬಳಿಕ ಡಾ. ಪ್ರಮೋದ್, ಯೂರೋಲೋಜಿಸ್ಟ್ ಮತ್ತು ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸ ತಜ್ಞ ಸಂತಸ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

14 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago