ಎರಡು ಬೈಕ್ ಗಳ ನಡುವೆ ಅಪಘಾತ: ಬುಲೈಟ್ ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಎರಡು ಬೈಕ್ ಗಳ ನಡುವೆ ಅಪಘಾತವಾಗಿದ್ದು, ಬುಲೈಟ್ ಬೈಕ್ ಸವಾರನ ಎರಡೂ ಕಾಲಗಳಿಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಇಂದು ಬೆಳಗ್ಗೆ ಯಲಹಂಕ-ಹಿಂದೂಪುರ ಹೆದ್ದಾರಿಯ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ನಡೆದಿದೆ‌.

ಬುಲೆಟ್ ಬೈಕ್ ಸವಾರನು ಸಿದ್ದೇನಾಯಕನಹಳ್ಳಿ ನಿವಾಸಿಯಾಗಿದ್ದು, ರಸ್ತೆ ದಾಟಲು ಮುಂದಾಗಿದ್ದ ವೇಳೆ ಯಲಹಂಕ ಕಡೆಯಿಂದ ವೇಗವಾಗಿ ಬಂದ ಕಾವಾಸಾಕಿ ಬೈಕ್ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಬುಲೆಟ್ ಬೈಕ್ ಸುಮಾರು 100‌ಮೀಟರ್ ದೂರ ಹಾರಿ ಹೋಗಿ ಬಿದ್ದಿದೆ. ಎರಡೂ ಬೈಕ್ ಗಳು ಸಂಪೂರ್ಣ ಜಖಂಗೊಂಡಿವೆ.

ಗಾಂಧಿ ಜಯಂತಿ ರಜೆಯಲ್ಲಿ ಜಾಲಿ ರೈಡ್ ಮಾಡಲೆಂದು ಕಾವಾಸಾಕಿ ಬೈಕ್ ಸವಾರ ವೇಗವಾಗಿ ಯಲಹಂಕ ಕಡೆಯಿಂದ ಬರುತ್ತಿದ್ದ ಎನ್ನಲಾಗಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿ, ಸಂಚಾರ ದಟ್ಟಣೆ ನಿಯಂತ್ರಣ ಮಾಡಿ, ಅಪಘಾತಗೊಂಡ ಬೈಕ್ ಗಳನ್ನು ತೆರವುಗೊಳಿಸಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

25 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

58 minutes ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

3 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago