ದೊಡ್ಡಬಳ್ಳಾಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಬೀಡಿಕೆರೆ ಹಾಗೂ ಮುಕ್ಕೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಾಳು ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗೌಚೇನಹಳ್ಳಿ ಹಾಗೂ ಶಿಡ್ಲಘಟ್ಟದವರು ಎಂದು ತಿಳಿದುಬಂದಿದೆ. ಬೈಕ್ ಸವಾರರ ಪೈಕಿ ಒಬ್ಬರಿಗೆ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮತ್ತೊಬ್ಬ ಸವಾರನ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ದೊಡ್ಡಬಳ್ಳಾಪುರದ ಪತ್ರಕರ್ತ ಕೊತ್ತೂರಪ್ಪ, ಅವರ ಸ್ನೇಹಿತರಾದ ವಡ್ಡರಪಾಳ್ಯ ನಾರಾಯಣಪ್ಪ ಹಾಗೂ ಸ್ಥಳೀಯರು ಉಪಚರಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ ಸಂಭವಿಸುತ್ತಲೇ ಸ್ಥಳದಲ್ಲಿದ್ದವರು 108 ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆದರೆ, ಆ ಸಿಬ್ಬಂದಿ ಖಾಸಗಿ ಅಂಬುಲೆನ್ಸ್ ಕಳುಹಿಸಿಕೊಟ್ಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳ ಪೋಷಕರು ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಹೆದರುವಂತಾಗಿದೆ.
ನಗರದ ಬಹುತೇಕ ಕಡೆಗಳಲ್ಲಿ ಅಪಘಾತ ಸಂಭವಿಸುವ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಗಳೇ ಬರುತ್ತಿದ್ದು, 108 ಅಂಬುಲೆನ್ಸ್ ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಣ್ಣಪುಟ್ಟ ಗಾಯಗಳಾಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳು 108 ಅಂಬುಲೆನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಸೂಕ್ತ ಸಮಯದಲ್ಲಿ ಸ್ಪಂದಿಸುವಂತೆ ನಿರ್ದೇಶನ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸಹಕರಿಸುತ್ತಿರುವ 108 ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…