ದೊಡ್ಡಬಳ್ಳಾಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಬೀಡಿಕೆರೆ ಹಾಗೂ ಮುಕ್ಕೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಾಳು ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗೌಚೇನಹಳ್ಳಿ ಹಾಗೂ ಶಿಡ್ಲಘಟ್ಟದವರು ಎಂದು ತಿಳಿದುಬಂದಿದೆ. ಬೈಕ್ ಸವಾರರ ಪೈಕಿ ಒಬ್ಬರಿಗೆ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮತ್ತೊಬ್ಬ ಸವಾರನ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ದೊಡ್ಡಬಳ್ಳಾಪುರದ ಪತ್ರಕರ್ತ ಕೊತ್ತೂರಪ್ಪ, ಅವರ ಸ್ನೇಹಿತರಾದ ವಡ್ಡರಪಾಳ್ಯ ನಾರಾಯಣಪ್ಪ ಹಾಗೂ ಸ್ಥಳೀಯರು ಉಪಚರಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ ಸಂಭವಿಸುತ್ತಲೇ ಸ್ಥಳದಲ್ಲಿದ್ದವರು 108 ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆದರೆ, ಆ ಸಿಬ್ಬಂದಿ ಖಾಸಗಿ ಅಂಬುಲೆನ್ಸ್ ಕಳುಹಿಸಿಕೊಟ್ಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳ ಪೋಷಕರು ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಹೆದರುವಂತಾಗಿದೆ.
ನಗರದ ಬಹುತೇಕ ಕಡೆಗಳಲ್ಲಿ ಅಪಘಾತ ಸಂಭವಿಸುವ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಗಳೇ ಬರುತ್ತಿದ್ದು, 108 ಅಂಬುಲೆನ್ಸ್ ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಣ್ಣಪುಟ್ಟ ಗಾಯಗಳಾಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳು 108 ಅಂಬುಲೆನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಸೂಕ್ತ ಸಮಯದಲ್ಲಿ ಸ್ಪಂದಿಸುವಂತೆ ನಿರ್ದೇಶನ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸಹಕರಿಸುತ್ತಿರುವ 108 ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…