ದೊಡ್ಡಬಳ್ಳಾಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಬೀಡಿಕೆರೆ ಹಾಗೂ ಮುಕ್ಕೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಾಳು ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗೌಚೇನಹಳ್ಳಿ ಹಾಗೂ ಶಿಡ್ಲಘಟ್ಟದವರು ಎಂದು ತಿಳಿದುಬಂದಿದೆ. ಬೈಕ್ ಸವಾರರ ಪೈಕಿ ಒಬ್ಬರಿಗೆ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮತ್ತೊಬ್ಬ ಸವಾರನ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ದೊಡ್ಡಬಳ್ಳಾಪುರದ ಪತ್ರಕರ್ತ ಕೊತ್ತೂರಪ್ಪ, ಅವರ ಸ್ನೇಹಿತರಾದ ವಡ್ಡರಪಾಳ್ಯ ನಾರಾಯಣಪ್ಪ ಹಾಗೂ ಸ್ಥಳೀಯರು ಉಪಚರಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ ಸಂಭವಿಸುತ್ತಲೇ ಸ್ಥಳದಲ್ಲಿದ್ದವರು 108 ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆದರೆ, ಆ ಸಿಬ್ಬಂದಿ ಖಾಸಗಿ ಅಂಬುಲೆನ್ಸ್ ಕಳುಹಿಸಿಕೊಟ್ಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳ ಪೋಷಕರು ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಹೆದರುವಂತಾಗಿದೆ.
ನಗರದ ಬಹುತೇಕ ಕಡೆಗಳಲ್ಲಿ ಅಪಘಾತ ಸಂಭವಿಸುವ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಗಳೇ ಬರುತ್ತಿದ್ದು, 108 ಅಂಬುಲೆನ್ಸ್ ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಣ್ಣಪುಟ್ಟ ಗಾಯಗಳಾಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳು 108 ಅಂಬುಲೆನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಸೂಕ್ತ ಸಮಯದಲ್ಲಿ ಸ್ಪಂದಿಸುವಂತೆ ನಿರ್ದೇಶನ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸಹಕರಿಸುತ್ತಿರುವ 108 ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…