ದೊಡ್ಡಬಳ್ಳಾಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಬೀಡಿಕೆರೆ ಹಾಗೂ ಮುಕ್ಕೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಾಳು ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗೌಚೇನಹಳ್ಳಿ ಹಾಗೂ ಶಿಡ್ಲಘಟ್ಟದವರು ಎಂದು ತಿಳಿದುಬಂದಿದೆ. ಬೈಕ್ ಸವಾರರ ಪೈಕಿ ಒಬ್ಬರಿಗೆ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮತ್ತೊಬ್ಬ ಸವಾರನ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ದೊಡ್ಡಬಳ್ಳಾಪುರದ ಪತ್ರಕರ್ತ ಕೊತ್ತೂರಪ್ಪ, ಅವರ ಸ್ನೇಹಿತರಾದ ವಡ್ಡರಪಾಳ್ಯ ನಾರಾಯಣಪ್ಪ ಹಾಗೂ ಸ್ಥಳೀಯರು ಉಪಚರಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ ಸಂಭವಿಸುತ್ತಲೇ ಸ್ಥಳದಲ್ಲಿದ್ದವರು 108 ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆದರೆ, ಆ ಸಿಬ್ಬಂದಿ ಖಾಸಗಿ ಅಂಬುಲೆನ್ಸ್ ಕಳುಹಿಸಿಕೊಟ್ಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳ ಪೋಷಕರು ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಹೆದರುವಂತಾಗಿದೆ.
ನಗರದ ಬಹುತೇಕ ಕಡೆಗಳಲ್ಲಿ ಅಪಘಾತ ಸಂಭವಿಸುವ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಗಳೇ ಬರುತ್ತಿದ್ದು, 108 ಅಂಬುಲೆನ್ಸ್ ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಣ್ಣಪುಟ್ಟ ಗಾಯಗಳಾಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳು 108 ಅಂಬುಲೆನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಸೂಕ್ತ ಸಮಯದಲ್ಲಿ ಸ್ಪಂದಿಸುವಂತೆ ನಿರ್ದೇಶನ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸಹಕರಿಸುತ್ತಿರುವ 108 ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…