ದೊಡ್ಡಬಳ್ಳಾಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಬೀಡಿಕೆರೆ ಹಾಗೂ ಮುಕ್ಕೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಾಳು ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗೌಚೇನಹಳ್ಳಿ ಹಾಗೂ ಶಿಡ್ಲಘಟ್ಟದವರು ಎಂದು ತಿಳಿದುಬಂದಿದೆ. ಬೈಕ್ ಸವಾರರ ಪೈಕಿ ಒಬ್ಬರಿಗೆ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮತ್ತೊಬ್ಬ ಸವಾರನ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ದೊಡ್ಡಬಳ್ಳಾಪುರದ ಪತ್ರಕರ್ತ ಕೊತ್ತೂರಪ್ಪ, ಅವರ ಸ್ನೇಹಿತರಾದ ವಡ್ಡರಪಾಳ್ಯ ನಾರಾಯಣಪ್ಪ ಹಾಗೂ ಸ್ಥಳೀಯರು ಉಪಚರಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತ ಸಂಭವಿಸುತ್ತಲೇ ಸ್ಥಳದಲ್ಲಿದ್ದವರು 108 ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆದರೆ, ಆ ಸಿಬ್ಬಂದಿ ಖಾಸಗಿ ಅಂಬುಲೆನ್ಸ್ ಕಳುಹಿಸಿಕೊಟ್ಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳ ಪೋಷಕರು ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಹೆದರುವಂತಾಗಿದೆ.
ನಗರದ ಬಹುತೇಕ ಕಡೆಗಳಲ್ಲಿ ಅಪಘಾತ ಸಂಭವಿಸುವ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಗಳೇ ಬರುತ್ತಿದ್ದು, 108 ಅಂಬುಲೆನ್ಸ್ ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಣ್ಣಪುಟ್ಟ ಗಾಯಗಳಾಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳು 108 ಅಂಬುಲೆನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಸೂಕ್ತ ಸಮಯದಲ್ಲಿ ಸ್ಪಂದಿಸುವಂತೆ ನಿರ್ದೇಶನ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸಹಕರಿಸುತ್ತಿರುವ 108 ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…