ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರಿಗೂ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಬೀಡಿಕೆರೆ ಹಾಗೂ ಮುಕ್ಕೇನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಗಾಯಾಳು ಬೈಕ್ ಸವಾರರನ್ನು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗೌಚೇನಹಳ್ಳಿ ಹಾಗೂ ಶಿಡ್ಲಘಟ್ಟದವರು ಎಂದು ತಿಳಿದುಬಂದಿದೆ. ಬೈಕ್ ಸವಾರರ ಪೈಕಿ ಒಬ್ಬರಿಗೆ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮತ್ತೊಬ್ಬ ಸವಾರನ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ದೊಡ್ಡಬಳ್ಳಾಪುರದ ಪತ್ರಕರ್ತ ಕೊತ್ತೂರಪ್ಪ, ಅವರ ಸ್ನೇಹಿತರಾದ ವಡ್ಡರಪಾಳ್ಯ ನಾರಾಯಣಪ್ಪ ಹಾಗೂ ಸ್ಥಳೀಯರು ಉಪಚರಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

108 ಅಲಭ್ಯ; ಸ್ಥಳಕ್ಕೆ ಧಾವಿಸಿದ ಖಾಸಗಿ ಅಂಬುಲೆನ್ಸ್

ಅಪಘಾತ ಸಂಭವಿಸುತ್ತಲೇ ಸ್ಥಳದಲ್ಲಿದ್ದವರು 108 ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆದರೆ, ಆ ಸಿಬ್ಬಂದಿ ಖಾಸಗಿ ಅಂಬುಲೆನ್ಸ್ ಕಳುಹಿಸಿಕೊಟ್ಟು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳ ಪೋಷಕರು ಖಾಸಗಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಹೆದರುವಂತಾಗಿದೆ.

ನಗರದ ಬಹುತೇಕ ಕಡೆಗಳಲ್ಲಿ ಅಪಘಾತ ಸಂಭವಿಸುವ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆ ಅಂಬುಲೆನ್ಸ್ ಗಳೇ ಬರುತ್ತಿದ್ದು, 108 ಅಂಬುಲೆನ್ಸ್ ಸಿಬ್ಬಂದಿ, ಖಾಸಗಿ ಆಸ್ಪತ್ರೆಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ‌ ಎಂಬ ಆರೋಪ ಕೇಳಿಬಂದಿದೆ.

ಸಣ್ಣಪುಟ್ಟ ಗಾಯಗಳಾಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿಗಳು 108 ಅಂಬುಲೆನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿ, ಸೂಕ್ತ ಸಮಯದಲ್ಲಿ ಸ್ಪಂದಿಸುವಂತೆ ನಿರ್ದೇಶನ ನೀಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸಹಕರಿಸುತ್ತಿರುವ 108 ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

4 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

5 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

18 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago