ವಿವಿಧ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎರಡು ಯೋಜನಾ ಪ್ರಾಧಿಕಾರಗಳಿಗೆ ಅದ್ಯಕ್ಷರು ಹಾಗೂ ಸದಸ್ಯರ ನೇಮಕ ಮಾಡಲಾಗಿದೆ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷರಾಗಿ ವಿ.ಶಾಂತಕುಮಾರ್ ಅವರನ್ನ ನೇಮಕ ಮಾಡಲಾಗಿದೆ.
ವಿ.ಮಂಜುನಾಥ್, ರಾಮಚಂದ್ರಪ್ಪ .ಸಿ ಪ್ರಸನ್ನಕುಮಾರ್ ಅವರನ್ನ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಅದೇರೀತಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿ.ಚುಂಚೇಗೌಡ ಅವರು ನೇಮಕಗೊಂಡಿದ್ದಾರೆ.
ಸದಸ್ಯರನ್ನಾಗಿ ರಾಮಕೃಷ್ಣಯ್ಯ.ಎಂ, ವೆಂಕಟೇಶ್, ಅಂಜನ್ ಮೂರ್ತಿ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.