ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಗಡುವು-ಸಚಿವ ಕೆ.ಎಚ್ ಮುನಿಯಪ್ಪ

ದೆವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಅಧಿಕಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಗಡುವು ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡುವ ಸಂಬಂಧ ಬುಧವಾರದಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಸೇರಿದಂತೆ ತಾಲ್ಲೂಕಿನಲ್ಲಿ ಬಡವರಿಗೆ, ನಿವೇಶನ ರಹಿತರಿಗೆ ಸೈಟ್ ಹಂಚಿಕೆ ಮಾಡಬೇಕು. ಸರ್ಕಾರ ಬಂದು ಮೂರು ವರ್ಷ ಪೂರೈಸಿದೆ. ಬಡವರಿಗೆ ನಿವೇಶನ, ವಸತಿ ಕಲ್ಪಿಸುವುದು ನಮ್ಮ ಜವಾಬ್ದಾರಿ ಆಗಿದೆ. ನಿವೇಶನ ಹಕ್ಕುಪತ್ರ ವಿತರಣೆ ವಿಳಂಬ ಆಗಬಾರದು.

ಈಗಾಗಲೇ ಎಲ್ಲೆಲ್ಲಿ ಸೈಟ್ ಅಭಿವೃದ್ಧಿ ಪಡಿಸಲಾಗಿದೆ ಅವುಗಳಿಗೆ ಫಲಾನುಭವಿಗಳ ಆಯ್ಕೆ ಹಾಗೂ ಹಕ್ಕುಪತ್ರ ರೆಡಿ ಮಾಡಿ. ನಿವೇಶನ ಅಭಿವೃದ್ಧಿ ಪಡಿಸುತ್ತಿರುವ ಜಾಗಗಳಲ್ಲಿ ಎಲ್ಲೆಲ್ಲಿ ತಕರಾರು, ಅಡಚಣೆ ಇದೆ ಅಲ್ಲಿಗೆ ತಹಶೀಲ್ದಾರ್, ಇಒ, ಸರ್ವೇಯರ್, ಆರ್.ಐಗಳು, ಸ್ಥಳೀಯ ಮುಖಂಡರು ಖುದ್ದು ಭೇಟಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಅರ್ಹ ಫಲಾನುಭವಿಗಳಿಗೆ ಪಕ್ಷಾತೀತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಮೇ‌.15 ರೊಳಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2000 ಸೈಟ್ ಗಳು ಸಿದ್ದ ಇರಬೇಕು ಇದು ಡಿಸಿ, ಸಿಇಒ ಜವಾಬ್ದಾರಿ ಎಂದರು.

*ಕುಡಿಯುವ ನೀರು ಸಮಸ್ಯೆ ತ್ವರಿತ ಪರಿಹಾರ ಒದಗಿಸಲು ಸೂಚನೆ* 

ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಕುಡಿಯುವ ನೀರು ಸಮಸ್ಯೆ ಉಲ್ಬಣವಾಗಿದೆ.  ಅಲ್ಲಿ ಪರ್ಯಾಯವಾಗಿ ಖಾಸಗಿ ಬೋರ್ವೆಲ್, ರೈತರ ಬೊರ್ವೆಲ್ ಗಳ ಮೂಲಕ ನೀರು ಪೂರೈಕೆ ಮಾಡಿ. ಯಾವುದೇ ಗ್ರಾಮ, ನಗರ ವ್ಯಾಪ್ತಿಯಲ್ಲಿ ಕುಡಿಯಲು ನೀರಿಲ್ಲ ಎಂದು ವರದಿ ಬರಬಾರದು. ಪಂಚಾಯಿತಿ ಪಿಡಿಒಗಳು ಬೆಳಿಗ್ಗೆ ಇಂದ ಸಂಜೆ ತನಕ ಕೇಂದ್ರ ಸ್ಥಾನದಲ್ಲಿ ಇದ್ದು, ಕುಡಿಯುವ ನೀರು ಸಮಸ್ಯೆ ನಿರ್ವಹಣೆ ಮಾಡಬೇಕು.‌ ಈಗಾಗಲೇ ಕುಡಿಯುವ ನೀರು ಸಮಸ್ಯೆ ಇರುವ ಜಾಗಗಳಲ್ಲಿ ಶೀಘ್ರ ಹೊಸ ಕೊಳವೆಬಾವಿಗಳನ್ನು ಕೊರೆಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೈಕೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಅಧ್ಯಕ್ಷ ಜಗನ್ನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago