ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಗಡುವು-ಸಚಿವ ಕೆ.ಎಚ್ ಮುನಿಯಪ್ಪ

ದೆವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಅಧಿಕಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಗಡುವು ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡುವ ಸಂಬಂಧ ಬುಧವಾರದಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಸೇರಿದಂತೆ ತಾಲ್ಲೂಕಿನಲ್ಲಿ ಬಡವರಿಗೆ, ನಿವೇಶನ ರಹಿತರಿಗೆ ಸೈಟ್ ಹಂಚಿಕೆ ಮಾಡಬೇಕು. ಸರ್ಕಾರ ಬಂದು ಮೂರು ವರ್ಷ ಪೂರೈಸಿದೆ. ಬಡವರಿಗೆ ನಿವೇಶನ, ವಸತಿ ಕಲ್ಪಿಸುವುದು ನಮ್ಮ ಜವಾಬ್ದಾರಿ ಆಗಿದೆ. ನಿವೇಶನ ಹಕ್ಕುಪತ್ರ ವಿತರಣೆ ವಿಳಂಬ ಆಗಬಾರದು.

ಈಗಾಗಲೇ ಎಲ್ಲೆಲ್ಲಿ ಸೈಟ್ ಅಭಿವೃದ್ಧಿ ಪಡಿಸಲಾಗಿದೆ ಅವುಗಳಿಗೆ ಫಲಾನುಭವಿಗಳ ಆಯ್ಕೆ ಹಾಗೂ ಹಕ್ಕುಪತ್ರ ರೆಡಿ ಮಾಡಿ. ನಿವೇಶನ ಅಭಿವೃದ್ಧಿ ಪಡಿಸುತ್ತಿರುವ ಜಾಗಗಳಲ್ಲಿ ಎಲ್ಲೆಲ್ಲಿ ತಕರಾರು, ಅಡಚಣೆ ಇದೆ ಅಲ್ಲಿಗೆ ತಹಶೀಲ್ದಾರ್, ಇಒ, ಸರ್ವೇಯರ್, ಆರ್.ಐಗಳು, ಸ್ಥಳೀಯ ಮುಖಂಡರು ಖುದ್ದು ಭೇಟಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಅರ್ಹ ಫಲಾನುಭವಿಗಳಿಗೆ ಪಕ್ಷಾತೀತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಮೇ‌.15 ರೊಳಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2000 ಸೈಟ್ ಗಳು ಸಿದ್ದ ಇರಬೇಕು ಇದು ಡಿಸಿ, ಸಿಇಒ ಜವಾಬ್ದಾರಿ ಎಂದರು.

*ಕುಡಿಯುವ ನೀರು ಸಮಸ್ಯೆ ತ್ವರಿತ ಪರಿಹಾರ ಒದಗಿಸಲು ಸೂಚನೆ* 

ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಕುಡಿಯುವ ನೀರು ಸಮಸ್ಯೆ ಉಲ್ಬಣವಾಗಿದೆ.  ಅಲ್ಲಿ ಪರ್ಯಾಯವಾಗಿ ಖಾಸಗಿ ಬೋರ್ವೆಲ್, ರೈತರ ಬೊರ್ವೆಲ್ ಗಳ ಮೂಲಕ ನೀರು ಪೂರೈಕೆ ಮಾಡಿ. ಯಾವುದೇ ಗ್ರಾಮ, ನಗರ ವ್ಯಾಪ್ತಿಯಲ್ಲಿ ಕುಡಿಯಲು ನೀರಿಲ್ಲ ಎಂದು ವರದಿ ಬರಬಾರದು. ಪಂಚಾಯಿತಿ ಪಿಡಿಒಗಳು ಬೆಳಿಗ್ಗೆ ಇಂದ ಸಂಜೆ ತನಕ ಕೇಂದ್ರ ಸ್ಥಾನದಲ್ಲಿ ಇದ್ದು, ಕುಡಿಯುವ ನೀರು ಸಮಸ್ಯೆ ನಿರ್ವಹಣೆ ಮಾಡಬೇಕು.‌ ಈಗಾಗಲೇ ಕುಡಿಯುವ ನೀರು ಸಮಸ್ಯೆ ಇರುವ ಜಾಗಗಳಲ್ಲಿ ಶೀಘ್ರ ಹೊಸ ಕೊಳವೆಬಾವಿಗಳನ್ನು ಕೊರೆಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೈಕೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಅಧ್ಯಕ್ಷ ಜಗನ್ನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

9 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

16 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

16 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago