Categories: ರಾಜ್ಯ

ಎರಡು ಹಂತದಲ್ಲಿ ಪಟ್ಟಿ ಶೀಘ್ರ ಬಿಡುಗಡೆ: ಸಿಎಂ ಬೊಮ್ಮಾಯಿ

ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಕೆ.ಎಸ್.ಈಶ್ವರಪ್ಪ ರಾಜೀನಾಮೆ: ಪಕ್ಷದ ಅಧ್ಯಕ್ಷರು ತೀರ್ಮಾನ

ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ಬಿಜೆಪಿಯಲ್ಲಿ ಸಂಪ್ರದಾಯ ಬೆಳೆಯುತ್ತಿದೆ

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.

ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ

ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ‌ ತಿಳಿಸಿದರು.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago