Categories: ರಾಜ್ಯ

ಎರಡು ಹಂತದಲ್ಲಿ ಪಟ್ಟಿ ಶೀಘ್ರ ಬಿಡುಗಡೆ: ಸಿಎಂ ಬೊಮ್ಮಾಯಿ

ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಕೆ.ಎಸ್.ಈಶ್ವರಪ್ಪ ರಾಜೀನಾಮೆ: ಪಕ್ಷದ ಅಧ್ಯಕ್ಷರು ತೀರ್ಮಾನ

ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ಬಿಜೆಪಿಯಲ್ಲಿ ಸಂಪ್ರದಾಯ ಬೆಳೆಯುತ್ತಿದೆ

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.

ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ

ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ‌ ತಿಳಿಸಿದರು.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

2 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

15 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

18 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

19 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

21 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

22 hours ago