ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.
ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.
ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ
ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…