Categories: ರಾಜ್ಯ

ಎರಡು ಹಂತದಲ್ಲಿ ಪಟ್ಟಿ ಶೀಘ್ರ ಬಿಡುಗಡೆ: ಸಿಎಂ ಬೊಮ್ಮಾಯಿ

ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಕೆ.ಎಸ್.ಈಶ್ವರಪ್ಪ ರಾಜೀನಾಮೆ: ಪಕ್ಷದ ಅಧ್ಯಕ್ಷರು ತೀರ್ಮಾನ

ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ಬಿಜೆಪಿಯಲ್ಲಿ ಸಂಪ್ರದಾಯ ಬೆಳೆಯುತ್ತಿದೆ

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.

ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ

ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ‌ ತಿಳಿಸಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

8 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago