ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.
ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.
ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ
ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…