Categories: ರಾಜ್ಯ

ಎರಡು ಹಂತದಲ್ಲಿ ಪಟ್ಟಿ ಶೀಘ್ರ ಬಿಡುಗಡೆ: ಸಿಎಂ ಬೊಮ್ಮಾಯಿ

ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಕೆ.ಎಸ್.ಈಶ್ವರಪ್ಪ ರಾಜೀನಾಮೆ: ಪಕ್ಷದ ಅಧ್ಯಕ್ಷರು ತೀರ್ಮಾನ

ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ಬಿಜೆಪಿಯಲ್ಲಿ ಸಂಪ್ರದಾಯ ಬೆಳೆಯುತ್ತಿದೆ

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.

ಬಿಜೆಪಿಯಿಂದ ದೇಶದಲ್ಲಿ ಬದಲಾವಣೆ

ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ‌ ತಿಳಿಸಿದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

56 minutes ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

5 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

6 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

8 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

8 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

12 hours ago