Categories: ತುಮಕೂರು

ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ತುಮಕೂರು ವಿವಿಗೆ ರಂಜಿತಾ ಫಸ್ಟ್ ರ‍್ಯಾಂಕ್: ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಸ್ವೀಕಾರ

ಹಾಸನ: ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನುವಂತೆ ಶಾಲಾ ಹಂತದಿಂದಲೂ ಓದಿನಲ್ಲಿ ಆಸಕ್ತಿ ಇಟ್ಟುಕೊಂಡು ಡಿಗ್ರಿಯಲ್ಲಿ ಪತ್ರಿಕೋದ್ಯಮ ವಿಷಯ ಆಯ್ಕೆ ಮಾಡಿ, ನೆಚ್ಚಿನ ವಿಷಯದಲ್ಲಿ ಗರಿಷ್ಠ ಅಂಕ ಗಳಿಸಿ ಬಹುಮಾನವನ್ನು ಪಡೆಯುತ್ತಿದ್ದ ಕುವರಿಯೊಬ್ಬಳು ಸ್ನಾತಕೋತ್ತರ ಪದವಿಯಲ್ಲೂ ಸಹ ಅತ್ಯುನ್ನತ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ‘ಫಸ್ಟ್ ರ‍್ಯಾಂಕ್’ ಗಳಿಸುವ ಮೂಲಕ “ಗೋಲ್ಡ್ ಮೆಡಲ್” ಅನ್ನು ತನ್ನ ಮುಡಿಗೆರಿಸಿಕೊಂಡಿದ್ದಾಳೆ.

ಹೌದು,, ಹಾಸನ ನಗರದ ಬಡ ಕುಟುಂಬದ ಕೃಷ್ಣಾ ಹಾಗೂ ಪುಷ್ಪಲತಾ ದಂಪತಿಯ ಪುತ್ರಿ ರಂಜಿತಾ ಹೆಚ್.ಕೆ ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮದ (ಎಂ.ಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ) ಪದವಿ ವ್ಯಾಸಂಗ ಮಾಡಿ ತುಮಕೂರು ವಿಶ್ವವಿದ್ಯಾಲಯಕ್ಕೆ ‘ಪ್ರಥಮ ಸ್ಥಾನ’ ಪಡೆದು ‘ಚಿನ್ನದ ಪದಕ’ಕ್ಕೆ ಭಾಜನರಾಗಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸಾಧಕಿ ರಂಜಿತಾ ಎಚ್.ಕೆ ಅವರು ‘ಗೋಲ್ಡ್ ಮೆಡಲ್’ ಅನ್ನು ಪಡೆದು ಹಾಸನ ಜಿಲ್ಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ.

ಸೋಲು ಶಾಶ್ವತವಲ್ಲ, ನಮ್ಮ ಪ್ರಯತ್ನ ಪ್ರಾಮಾಣಿಕವಾಗಿದ್ರೆ ಗೆಲುವು ಖಚಿತ ಅನ್ನೋ ಮಾತನ್ನು ನಿಜವೆಂದು ರಂಜಿತಾ ತೋರಿಸಿಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಮೀಡಿಯಾ ಪದವಿಯ ಮೂರು ಸೆಮಿಸ್ಟರ್ ಗಳಲ್ಲಿ ‘ತೃತೀಯ ರ‍್ಯಾಂಕ್’ ಪಡೆಯುತ್ತಿದ್ದರು, ಕೊನೆಯ ಸೆಮಿಸ್ಟರ್‌ನಲ್ಲಿ ನಿರಂತರ ಅಧ್ಯಯನಶೀಲರಾಗಿ ‘ವಿವಿ ಮಟ್ಟದಲ್ಲಿ ಪ್ರಥಮ ರ‍್ಯಾಂಕ್’ ಗಳಿಸುವ ಮೂಲಕ ‘ಚಿನ್ನದ ಪದಕ’ದೊಂದಿಗೆ ಸಾಧನೆಗೈದು ಪತ್ರಿಕೋದ್ಯಮ ಓದುವ ಜೂನಿಯರ್ಸ್ ಗಳಿಗೆ ಮಾದರಿಯಾಗಿದ್ದಾರೆ.

“ಓದುವ ತವಕ ಹಾಗೂ ಪ್ರಾಯೋಗಿಕ ಅಧ್ಯಯನದಲ್ಲಿ ಕ್ರೀಯಾಶೀಲವಾಗಿ ರಂಜೀತಾ ತೊಡಗುತ್ತಿದ್ದರು.ಆ ಶ್ರಮಕ್ಕೆ ವಿವಿಯ ‘ಗೋಲ್ಡ್ ಮೆಡಲ್’ ಸಂದಿದೆ. ಇವರ ಸಾಧನೆಯಿಂದ ಕಾಲೇಜಿನ ಕೀರ್ತಿ ಹೆಚ್ಚಿಸುವ ಜತೆಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರೇರಣೆ ತುಂಬಿದೆ ಎಂದು ತುಮಕೂರಿನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ ಮುದ್ದೇಶ್ ಹೇಳಿದ್ದಾರೆ.

“ನನ್ನ ಆತ್ಮವಿಶ್ವಾಸ ಹಾಗೂ ನಿರಂತರ ಅಧ್ಯಯನದ ಜತೆಗೆ ಗುರುಗಳ ಮಾರ್ಗದರ್ಶನ ಪಾಲನೆಯಿಂದ ಉತ್ತಮ ಅಂಕ ಗಳಿಸುವ ಜತೆಗೆ ‘ಪ್ರಥಮ ರ‍್ಯಾಂಕ್’ ಪಡೆಯಲು ಸಾಧ್ಯವಾಯಿತು. ನನ್ನ ಓದಿಗೆ ತಂದೆ-ತಾಯಿ ಹಾಗೂ ಸ್ನೇಹಿತರ ಸಹಕಾರ ಬಹಳಷ್ಟು ಇತ್ತು ಎಂದು ಚಿನ್ನದ ಪದಕ ವಿಜೇತೆ ರಂಜೀತಾ ಎಚ್.ಕೆ ತಿಳಿಸಿದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

58 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago