Categories: ತುಮಕೂರು

ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ತುಮಕೂರು ವಿವಿಗೆ ರಂಜಿತಾ ಫಸ್ಟ್ ರ‍್ಯಾಂಕ್: ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಸ್ವೀಕಾರ

ಹಾಸನ: ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನುವಂತೆ ಶಾಲಾ ಹಂತದಿಂದಲೂ ಓದಿನಲ್ಲಿ ಆಸಕ್ತಿ ಇಟ್ಟುಕೊಂಡು ಡಿಗ್ರಿಯಲ್ಲಿ ಪತ್ರಿಕೋದ್ಯಮ ವಿಷಯ ಆಯ್ಕೆ ಮಾಡಿ, ನೆಚ್ಚಿನ ವಿಷಯದಲ್ಲಿ ಗರಿಷ್ಠ ಅಂಕ ಗಳಿಸಿ ಬಹುಮಾನವನ್ನು ಪಡೆಯುತ್ತಿದ್ದ ಕುವರಿಯೊಬ್ಬಳು ಸ್ನಾತಕೋತ್ತರ ಪದವಿಯಲ್ಲೂ ಸಹ ಅತ್ಯುನ್ನತ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ‘ಫಸ್ಟ್ ರ‍್ಯಾಂಕ್’ ಗಳಿಸುವ ಮೂಲಕ “ಗೋಲ್ಡ್ ಮೆಡಲ್” ಅನ್ನು ತನ್ನ ಮುಡಿಗೆರಿಸಿಕೊಂಡಿದ್ದಾಳೆ.

ಹೌದು,, ಹಾಸನ ನಗರದ ಬಡ ಕುಟುಂಬದ ಕೃಷ್ಣಾ ಹಾಗೂ ಪುಷ್ಪಲತಾ ದಂಪತಿಯ ಪುತ್ರಿ ರಂಜಿತಾ ಹೆಚ್.ಕೆ ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮದ (ಎಂ.ಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ) ಪದವಿ ವ್ಯಾಸಂಗ ಮಾಡಿ ತುಮಕೂರು ವಿಶ್ವವಿದ್ಯಾಲಯಕ್ಕೆ ‘ಪ್ರಥಮ ಸ್ಥಾನ’ ಪಡೆದು ‘ಚಿನ್ನದ ಪದಕ’ಕ್ಕೆ ಭಾಜನರಾಗಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸಾಧಕಿ ರಂಜಿತಾ ಎಚ್.ಕೆ ಅವರು ‘ಗೋಲ್ಡ್ ಮೆಡಲ್’ ಅನ್ನು ಪಡೆದು ಹಾಸನ ಜಿಲ್ಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ.

ಸೋಲು ಶಾಶ್ವತವಲ್ಲ, ನಮ್ಮ ಪ್ರಯತ್ನ ಪ್ರಾಮಾಣಿಕವಾಗಿದ್ರೆ ಗೆಲುವು ಖಚಿತ ಅನ್ನೋ ಮಾತನ್ನು ನಿಜವೆಂದು ರಂಜಿತಾ ತೋರಿಸಿಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಮೀಡಿಯಾ ಪದವಿಯ ಮೂರು ಸೆಮಿಸ್ಟರ್ ಗಳಲ್ಲಿ ‘ತೃತೀಯ ರ‍್ಯಾಂಕ್’ ಪಡೆಯುತ್ತಿದ್ದರು, ಕೊನೆಯ ಸೆಮಿಸ್ಟರ್‌ನಲ್ಲಿ ನಿರಂತರ ಅಧ್ಯಯನಶೀಲರಾಗಿ ‘ವಿವಿ ಮಟ್ಟದಲ್ಲಿ ಪ್ರಥಮ ರ‍್ಯಾಂಕ್’ ಗಳಿಸುವ ಮೂಲಕ ‘ಚಿನ್ನದ ಪದಕ’ದೊಂದಿಗೆ ಸಾಧನೆಗೈದು ಪತ್ರಿಕೋದ್ಯಮ ಓದುವ ಜೂನಿಯರ್ಸ್ ಗಳಿಗೆ ಮಾದರಿಯಾಗಿದ್ದಾರೆ.

“ಓದುವ ತವಕ ಹಾಗೂ ಪ್ರಾಯೋಗಿಕ ಅಧ್ಯಯನದಲ್ಲಿ ಕ್ರೀಯಾಶೀಲವಾಗಿ ರಂಜೀತಾ ತೊಡಗುತ್ತಿದ್ದರು.ಆ ಶ್ರಮಕ್ಕೆ ವಿವಿಯ ‘ಗೋಲ್ಡ್ ಮೆಡಲ್’ ಸಂದಿದೆ. ಇವರ ಸಾಧನೆಯಿಂದ ಕಾಲೇಜಿನ ಕೀರ್ತಿ ಹೆಚ್ಚಿಸುವ ಜತೆಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರೇರಣೆ ತುಂಬಿದೆ ಎಂದು ತುಮಕೂರಿನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ ಮುದ್ದೇಶ್ ಹೇಳಿದ್ದಾರೆ.

“ನನ್ನ ಆತ್ಮವಿಶ್ವಾಸ ಹಾಗೂ ನಿರಂತರ ಅಧ್ಯಯನದ ಜತೆಗೆ ಗುರುಗಳ ಮಾರ್ಗದರ್ಶನ ಪಾಲನೆಯಿಂದ ಉತ್ತಮ ಅಂಕ ಗಳಿಸುವ ಜತೆಗೆ ‘ಪ್ರಥಮ ರ‍್ಯಾಂಕ್’ ಪಡೆಯಲು ಸಾಧ್ಯವಾಯಿತು. ನನ್ನ ಓದಿಗೆ ತಂದೆ-ತಾಯಿ ಹಾಗೂ ಸ್ನೇಹಿತರ ಸಹಕಾರ ಬಹಳಷ್ಟು ಇತ್ತು ಎಂದು ಚಿನ್ನದ ಪದಕ ವಿಜೇತೆ ರಂಜೀತಾ ಎಚ್.ಕೆ ತಿಳಿಸಿದರು.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

3 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

13 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

18 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

19 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

21 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago