Categories: ತುಮಕೂರು

ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ತುಮಕೂರು ವಿವಿಗೆ ರಂಜಿತಾ ಫಸ್ಟ್ ರ‍್ಯಾಂಕ್: ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಸ್ವೀಕಾರ

ಹಾಸನ: ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನುವಂತೆ ಶಾಲಾ ಹಂತದಿಂದಲೂ ಓದಿನಲ್ಲಿ ಆಸಕ್ತಿ ಇಟ್ಟುಕೊಂಡು ಡಿಗ್ರಿಯಲ್ಲಿ ಪತ್ರಿಕೋದ್ಯಮ ವಿಷಯ ಆಯ್ಕೆ ಮಾಡಿ, ನೆಚ್ಚಿನ ವಿಷಯದಲ್ಲಿ ಗರಿಷ್ಠ ಅಂಕ ಗಳಿಸಿ ಬಹುಮಾನವನ್ನು ಪಡೆಯುತ್ತಿದ್ದ ಕುವರಿಯೊಬ್ಬಳು ಸ್ನಾತಕೋತ್ತರ ಪದವಿಯಲ್ಲೂ ಸಹ ಅತ್ಯುನ್ನತ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ‘ಫಸ್ಟ್ ರ‍್ಯಾಂಕ್’ ಗಳಿಸುವ ಮೂಲಕ “ಗೋಲ್ಡ್ ಮೆಡಲ್” ಅನ್ನು ತನ್ನ ಮುಡಿಗೆರಿಸಿಕೊಂಡಿದ್ದಾಳೆ.

ಹೌದು,, ಹಾಸನ ನಗರದ ಬಡ ಕುಟುಂಬದ ಕೃಷ್ಣಾ ಹಾಗೂ ಪುಷ್ಪಲತಾ ದಂಪತಿಯ ಪುತ್ರಿ ರಂಜಿತಾ ಹೆಚ್.ಕೆ ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮದ (ಎಂ.ಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ) ಪದವಿ ವ್ಯಾಸಂಗ ಮಾಡಿ ತುಮಕೂರು ವಿಶ್ವವಿದ್ಯಾಲಯಕ್ಕೆ ‘ಪ್ರಥಮ ಸ್ಥಾನ’ ಪಡೆದು ‘ಚಿನ್ನದ ಪದಕ’ಕ್ಕೆ ಭಾಜನರಾಗಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸಾಧಕಿ ರಂಜಿತಾ ಎಚ್.ಕೆ ಅವರು ‘ಗೋಲ್ಡ್ ಮೆಡಲ್’ ಅನ್ನು ಪಡೆದು ಹಾಸನ ಜಿಲ್ಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ.

ಸೋಲು ಶಾಶ್ವತವಲ್ಲ, ನಮ್ಮ ಪ್ರಯತ್ನ ಪ್ರಾಮಾಣಿಕವಾಗಿದ್ರೆ ಗೆಲುವು ಖಚಿತ ಅನ್ನೋ ಮಾತನ್ನು ನಿಜವೆಂದು ರಂಜಿತಾ ತೋರಿಸಿಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಮೀಡಿಯಾ ಪದವಿಯ ಮೂರು ಸೆಮಿಸ್ಟರ್ ಗಳಲ್ಲಿ ‘ತೃತೀಯ ರ‍್ಯಾಂಕ್’ ಪಡೆಯುತ್ತಿದ್ದರು, ಕೊನೆಯ ಸೆಮಿಸ್ಟರ್‌ನಲ್ಲಿ ನಿರಂತರ ಅಧ್ಯಯನಶೀಲರಾಗಿ ‘ವಿವಿ ಮಟ್ಟದಲ್ಲಿ ಪ್ರಥಮ ರ‍್ಯಾಂಕ್’ ಗಳಿಸುವ ಮೂಲಕ ‘ಚಿನ್ನದ ಪದಕ’ದೊಂದಿಗೆ ಸಾಧನೆಗೈದು ಪತ್ರಿಕೋದ್ಯಮ ಓದುವ ಜೂನಿಯರ್ಸ್ ಗಳಿಗೆ ಮಾದರಿಯಾಗಿದ್ದಾರೆ.

“ಓದುವ ತವಕ ಹಾಗೂ ಪ್ರಾಯೋಗಿಕ ಅಧ್ಯಯನದಲ್ಲಿ ಕ್ರೀಯಾಶೀಲವಾಗಿ ರಂಜೀತಾ ತೊಡಗುತ್ತಿದ್ದರು.ಆ ಶ್ರಮಕ್ಕೆ ವಿವಿಯ ‘ಗೋಲ್ಡ್ ಮೆಡಲ್’ ಸಂದಿದೆ. ಇವರ ಸಾಧನೆಯಿಂದ ಕಾಲೇಜಿನ ಕೀರ್ತಿ ಹೆಚ್ಚಿಸುವ ಜತೆಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರೇರಣೆ ತುಂಬಿದೆ ಎಂದು ತುಮಕೂರಿನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ ಮುದ್ದೇಶ್ ಹೇಳಿದ್ದಾರೆ.

“ನನ್ನ ಆತ್ಮವಿಶ್ವಾಸ ಹಾಗೂ ನಿರಂತರ ಅಧ್ಯಯನದ ಜತೆಗೆ ಗುರುಗಳ ಮಾರ್ಗದರ್ಶನ ಪಾಲನೆಯಿಂದ ಉತ್ತಮ ಅಂಕ ಗಳಿಸುವ ಜತೆಗೆ ‘ಪ್ರಥಮ ರ‍್ಯಾಂಕ್’ ಪಡೆಯಲು ಸಾಧ್ಯವಾಯಿತು. ನನ್ನ ಓದಿಗೆ ತಂದೆ-ತಾಯಿ ಹಾಗೂ ಸ್ನೇಹಿತರ ಸಹಕಾರ ಬಹಳಷ್ಟು ಇತ್ತು ಎಂದು ಚಿನ್ನದ ಪದಕ ವಿಜೇತೆ ರಂಜೀತಾ ಎಚ್.ಕೆ ತಿಳಿಸಿದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

3 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

12 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

22 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

24 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago