Categories: ತುಮಕೂರು

ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ತುಮಕೂರು ವಿವಿಗೆ ರಂಜಿತಾ ಫಸ್ಟ್ ರ‍್ಯಾಂಕ್: ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಸ್ವೀಕಾರ

ಹಾಸನ: ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನುವಂತೆ ಶಾಲಾ ಹಂತದಿಂದಲೂ ಓದಿನಲ್ಲಿ ಆಸಕ್ತಿ ಇಟ್ಟುಕೊಂಡು ಡಿಗ್ರಿಯಲ್ಲಿ ಪತ್ರಿಕೋದ್ಯಮ ವಿಷಯ ಆಯ್ಕೆ ಮಾಡಿ, ನೆಚ್ಚಿನ ವಿಷಯದಲ್ಲಿ ಗರಿಷ್ಠ ಅಂಕ ಗಳಿಸಿ ಬಹುಮಾನವನ್ನು ಪಡೆಯುತ್ತಿದ್ದ ಕುವರಿಯೊಬ್ಬಳು ಸ್ನಾತಕೋತ್ತರ ಪದವಿಯಲ್ಲೂ ಸಹ ಅತ್ಯುನ್ನತ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ‘ಫಸ್ಟ್ ರ‍್ಯಾಂಕ್’ ಗಳಿಸುವ ಮೂಲಕ “ಗೋಲ್ಡ್ ಮೆಡಲ್” ಅನ್ನು ತನ್ನ ಮುಡಿಗೆರಿಸಿಕೊಂಡಿದ್ದಾಳೆ.

ಹೌದು,, ಹಾಸನ ನಗರದ ಬಡ ಕುಟುಂಬದ ಕೃಷ್ಣಾ ಹಾಗೂ ಪುಷ್ಪಲತಾ ದಂಪತಿಯ ಪುತ್ರಿ ರಂಜಿತಾ ಹೆಚ್.ಕೆ ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮದ (ಎಂ.ಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ) ಪದವಿ ವ್ಯಾಸಂಗ ಮಾಡಿ ತುಮಕೂರು ವಿಶ್ವವಿದ್ಯಾಲಯಕ್ಕೆ ‘ಪ್ರಥಮ ಸ್ಥಾನ’ ಪಡೆದು ‘ಚಿನ್ನದ ಪದಕ’ಕ್ಕೆ ಭಾಜನರಾಗಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸಾಧಕಿ ರಂಜಿತಾ ಎಚ್.ಕೆ ಅವರು ‘ಗೋಲ್ಡ್ ಮೆಡಲ್’ ಅನ್ನು ಪಡೆದು ಹಾಸನ ಜಿಲ್ಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ.

ಸೋಲು ಶಾಶ್ವತವಲ್ಲ, ನಮ್ಮ ಪ್ರಯತ್ನ ಪ್ರಾಮಾಣಿಕವಾಗಿದ್ರೆ ಗೆಲುವು ಖಚಿತ ಅನ್ನೋ ಮಾತನ್ನು ನಿಜವೆಂದು ರಂಜಿತಾ ತೋರಿಸಿಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಮೀಡಿಯಾ ಪದವಿಯ ಮೂರು ಸೆಮಿಸ್ಟರ್ ಗಳಲ್ಲಿ ‘ತೃತೀಯ ರ‍್ಯಾಂಕ್’ ಪಡೆಯುತ್ತಿದ್ದರು, ಕೊನೆಯ ಸೆಮಿಸ್ಟರ್‌ನಲ್ಲಿ ನಿರಂತರ ಅಧ್ಯಯನಶೀಲರಾಗಿ ‘ವಿವಿ ಮಟ್ಟದಲ್ಲಿ ಪ್ರಥಮ ರ‍್ಯಾಂಕ್’ ಗಳಿಸುವ ಮೂಲಕ ‘ಚಿನ್ನದ ಪದಕ’ದೊಂದಿಗೆ ಸಾಧನೆಗೈದು ಪತ್ರಿಕೋದ್ಯಮ ಓದುವ ಜೂನಿಯರ್ಸ್ ಗಳಿಗೆ ಮಾದರಿಯಾಗಿದ್ದಾರೆ.

“ಓದುವ ತವಕ ಹಾಗೂ ಪ್ರಾಯೋಗಿಕ ಅಧ್ಯಯನದಲ್ಲಿ ಕ್ರೀಯಾಶೀಲವಾಗಿ ರಂಜೀತಾ ತೊಡಗುತ್ತಿದ್ದರು.ಆ ಶ್ರಮಕ್ಕೆ ವಿವಿಯ ‘ಗೋಲ್ಡ್ ಮೆಡಲ್’ ಸಂದಿದೆ. ಇವರ ಸಾಧನೆಯಿಂದ ಕಾಲೇಜಿನ ಕೀರ್ತಿ ಹೆಚ್ಚಿಸುವ ಜತೆಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರೇರಣೆ ತುಂಬಿದೆ ಎಂದು ತುಮಕೂರಿನ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ ಮುದ್ದೇಶ್ ಹೇಳಿದ್ದಾರೆ.

“ನನ್ನ ಆತ್ಮವಿಶ್ವಾಸ ಹಾಗೂ ನಿರಂತರ ಅಧ್ಯಯನದ ಜತೆಗೆ ಗುರುಗಳ ಮಾರ್ಗದರ್ಶನ ಪಾಲನೆಯಿಂದ ಉತ್ತಮ ಅಂಕ ಗಳಿಸುವ ಜತೆಗೆ ‘ಪ್ರಥಮ ರ‍್ಯಾಂಕ್’ ಪಡೆಯಲು ಸಾಧ್ಯವಾಯಿತು. ನನ್ನ ಓದಿಗೆ ತಂದೆ-ತಾಯಿ ಹಾಗೂ ಸ್ನೇಹಿತರ ಸಹಕಾರ ಬಹಳಷ್ಟು ಇತ್ತು ಎಂದು ಚಿನ್ನದ ಪದಕ ವಿಜೇತೆ ರಂಜೀತಾ ಎಚ್.ಕೆ ತಿಳಿಸಿದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

6 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

7 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

20 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

20 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

21 hours ago