ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.
ಇದೆ ಸಂದರ್ಭದಲ್ಲಿ ಮಾತನಾಡಿದ ಸಿ ಆರ್ ಪಿ ಲೋಕೇಶ್ ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ ಬೇಕಾದರೂ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಅಭಿಪ್ರಾಯಪಟ್ಟರು ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.
ವಿದ್ಯಾರ್ಥಿ ಪೋಷಕರಾದ ಶಿವರಾಜ್ ಪಾಟೀಲ್ ಮಾತನಾಡಿ ಮಕ್ಕಳ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.
ಇನ್ನು ಎಲೈಟ್ ಇಂಟರ್ನ್ಯಾಷನಲ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಭರತನಾಟ್ಯ ನಾಟಕ ಯೋಗಾಸನ ಕನ್ನಡದ ಜಾನಪದ ಸೊಗಡು, ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಪ್ರತಿಭೆ ಪ್ರದರ್ಶಿಸಿ ಪೋಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ವೆಂಕಟೇಶ್, ಋತಿಕ, ಆಶಾ, ರೇಷ್ಮಾ, ಮಹಾದೇವಿ,ಶ್ವೇತಾ, ಸ್ವಪ್ನ, ಚಂದನ, ರೂಪ, ರಾಣಿ,ಐಶಾ, ಸುಮ,ಜಾಯ್ಸ್, ನಾಗೇಶ, ದೇವರಾಜ್, ಯಲ್ಲಪ್ಪ ಉಪಸ್ಥಿತಿ ಇದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…