ಎಲೈಟ್ ಇಂಟರ್ನ್ಯಾಷನಲ್ ಶಾಲೆಯ 2025ನೇ ಚರಿಸ್ ಸಂಭ್ರಮ

ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.

ಇದೆ ಸಂದರ್ಭದಲ್ಲಿ ಮಾತನಾಡಿದ ಸಿ ಆರ್ ಪಿ ಲೋಕೇಶ್ ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ‌ ಬೇಕಾದರೂ‌ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಅಭಿಪ್ರಾಯಪಟ್ಟರು ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

ವಿದ್ಯಾರ್ಥಿ ಪೋಷಕರಾದ ಶಿವರಾಜ್ ಪಾಟೀಲ್ ಮಾತನಾಡಿ ಮಕ್ಕಳ‌ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ‌ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಸ್ಥರು ಶೃತಿಕ ಮಾತನಾಡಿ ಆಡಳಿತ ಮಂಡಳಿ ಮೇಲೆ‌ ಪೋಷಕರು ಇಟ್ಟಿರುವ ನಂಬಿಕೆ‌ಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲ‌ಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ‌ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಇನ್ನು ಎಲೈಟ್ ಇಂಟರ್ನ್ಯಾಷನಲ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಭರತನಾಟ್ಯ ನಾಟಕ ಯೋಗಾಸನ ಕನ್ನಡದ ಜಾನಪದ ಸೊಗಡು, ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಪ್ರತಿಭೆ ಪ್ರದರ್ಶಿಸಿ ಪೋಷಕರ‌ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ವೆಂಕಟೇಶ್, ಋತಿಕ, ಆಶಾ, ರೇಷ್ಮಾ, ಮಹಾದೇವಿ,ಶ್ವೇತಾ, ಸ್ವಪ್ನ, ಚಂದನ, ರೂಪ, ರಾಣಿ,ಐಶಾ, ಸುಮ,ಜಾಯ್ಸ್, ನಾಗೇಶ, ದೇವರಾಜ್, ಯಲ್ಲಪ್ಪ ಉಪಸ್ಥಿತಿ ಇದ್ದರು.

Ramesh Babu

Journalist

Recent Posts

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

3 hours ago

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

15 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

17 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

17 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

18 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

20 hours ago