ಎಲೈಟ್ ಇಂಟರ್ನ್ಯಾಷನಲ್ ಶಾಲೆಯ 2025ನೇ ಚರಿಸ್ ಸಂಭ್ರಮ

ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.

ಇದೆ ಸಂದರ್ಭದಲ್ಲಿ ಮಾತನಾಡಿದ ಸಿ ಆರ್ ಪಿ ಲೋಕೇಶ್ ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ‌ ಬೇಕಾದರೂ‌ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಅಭಿಪ್ರಾಯಪಟ್ಟರು ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

ವಿದ್ಯಾರ್ಥಿ ಪೋಷಕರಾದ ಶಿವರಾಜ್ ಪಾಟೀಲ್ ಮಾತನಾಡಿ ಮಕ್ಕಳ‌ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ‌ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಸ್ಥರು ಶೃತಿಕ ಮಾತನಾಡಿ ಆಡಳಿತ ಮಂಡಳಿ ಮೇಲೆ‌ ಪೋಷಕರು ಇಟ್ಟಿರುವ ನಂಬಿಕೆ‌ಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲ‌ಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ‌ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಇನ್ನು ಎಲೈಟ್ ಇಂಟರ್ನ್ಯಾಷನಲ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಭರತನಾಟ್ಯ ನಾಟಕ ಯೋಗಾಸನ ಕನ್ನಡದ ಜಾನಪದ ಸೊಗಡು, ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಪ್ರತಿಭೆ ಪ್ರದರ್ಶಿಸಿ ಪೋಷಕರ‌ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ವೆಂಕಟೇಶ್, ಋತಿಕ, ಆಶಾ, ರೇಷ್ಮಾ, ಮಹಾದೇವಿ,ಶ್ವೇತಾ, ಸ್ವಪ್ನ, ಚಂದನ, ರೂಪ, ರಾಣಿ,ಐಶಾ, ಸುಮ,ಜಾಯ್ಸ್, ನಾಗೇಶ, ದೇವರಾಜ್, ಯಲ್ಲಪ್ಪ ಉಪಸ್ಥಿತಿ ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

20 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago