ಎಲೈಟ್ ಇಂಟರ್ನ್ಯಾಷನಲ್ ಶಾಲೆಯ 2025ನೇ ಚರಿಸ್ ಸಂಭ್ರಮ

ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.

ಇದೆ ಸಂದರ್ಭದಲ್ಲಿ ಮಾತನಾಡಿದ ಸಿ ಆರ್ ಪಿ ಲೋಕೇಶ್ ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ‌ ಬೇಕಾದರೂ‌ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಅಭಿಪ್ರಾಯಪಟ್ಟರು ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

ವಿದ್ಯಾರ್ಥಿ ಪೋಷಕರಾದ ಶಿವರಾಜ್ ಪಾಟೀಲ್ ಮಾತನಾಡಿ ಮಕ್ಕಳ‌ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ‌ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಸ್ಥರು ಶೃತಿಕ ಮಾತನಾಡಿ ಆಡಳಿತ ಮಂಡಳಿ ಮೇಲೆ‌ ಪೋಷಕರು ಇಟ್ಟಿರುವ ನಂಬಿಕೆ‌ಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲ‌ಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ‌ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಇನ್ನು ಎಲೈಟ್ ಇಂಟರ್ನ್ಯಾಷನಲ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಭರತನಾಟ್ಯ ನಾಟಕ ಯೋಗಾಸನ ಕನ್ನಡದ ಜಾನಪದ ಸೊಗಡು, ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಪ್ರತಿಭೆ ಪ್ರದರ್ಶಿಸಿ ಪೋಷಕರ‌ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ವೆಂಕಟೇಶ್, ಋತಿಕ, ಆಶಾ, ರೇಷ್ಮಾ, ಮಹಾದೇವಿ,ಶ್ವೇತಾ, ಸ್ವಪ್ನ, ಚಂದನ, ರೂಪ, ರಾಣಿ,ಐಶಾ, ಸುಮ,ಜಾಯ್ಸ್, ನಾಗೇಶ, ದೇವರಾಜ್, ಯಲ್ಲಪ್ಪ ಉಪಸ್ಥಿತಿ ಇದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

8 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago