ದೇವನಹಳ್ಳಿ ತಾಲೂಕು ಬೂದಿಗೆರೆ ಎಲೈಟ್ ಇಂಟರ್ ನ್ಯಾಷನಲ್ ಶಾಲೆಯ ಚರಿಸ್ ಸಂಭ್ರಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಮಾ ರಮೇಶ್ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.
ಇದೆ ಸಂದರ್ಭದಲ್ಲಿ ಮಾತನಾಡಿದ ಸಿ ಆರ್ ಪಿ ಲೋಕೇಶ್ ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ ಬೇಕಾದರೂ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಅಭಿಪ್ರಾಯಪಟ್ಟರು ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.
ವಿದ್ಯಾರ್ಥಿ ಪೋಷಕರಾದ ಶಿವರಾಜ್ ಪಾಟೀಲ್ ಮಾತನಾಡಿ ಮಕ್ಕಳ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.
ಇನ್ನು ಎಲೈಟ್ ಇಂಟರ್ನ್ಯಾಷನಲ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಭರತನಾಟ್ಯ ನಾಟಕ ಯೋಗಾಸನ ಕನ್ನಡದ ಜಾನಪದ ಸೊಗಡು, ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು ಪ್ರತಿಭೆ ಪ್ರದರ್ಶಿಸಿ ಪೋಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ವೆಂಕಟೇಶ್, ಋತಿಕ, ಆಶಾ, ರೇಷ್ಮಾ, ಮಹಾದೇವಿ,ಶ್ವೇತಾ, ಸ್ವಪ್ನ, ಚಂದನ, ರೂಪ, ರಾಣಿ,ಐಶಾ, ಸುಮ,ಜಾಯ್ಸ್, ನಾಗೇಶ, ದೇವರಾಜ್, ಯಲ್ಲಪ್ಪ ಉಪಸ್ಥಿತಿ ಇದ್ದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…