ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಅಭಾವ ಉಂಟಾಗಬಹುದು ಎಂಬ ಭೀತಿಯಿಂದ, ಸಿಲಿಂಡ ರ್ ಗಾಗಿ ಜನರು ಮುಗಿಬಿದ್ದಿದ್ದಾರೆ.
ಇಂತಹ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿಂದು ಎಲ್ಪಿಜಿ ಸಿಲಿಂಡರ್ ಗಾಗಿ ಇಡೀ ಗ್ರಾಮವೇ ಮುಗಿಬಿದ್ದಿರುವ ದೃಶ್ಯ ಕಂಡುಬಂದಿದೆ…
ಗ್ಯಾಸ್ ಸಿಲಿಂಡರ್ ಏಜೆನ್ಸಿ ಅವರು ಬುಕ್ ಮಾಡಿರುವವರಿಗೆ ಸಿಲಿಂಡರ್ ಕೊಡುವುದನ್ನು ಬಿಟ್ಟು ಬ್ಲಾಕ್ ನಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ…. ಇದಕ್ಕೆ ಗ್ರಾಮಸ್ಥರು ಹಾಗೂ ಏಜೆನ್ಸಿ ಅವರು ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ..
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ಗೃಹ ಬಳಕೆ ಸಿಲಿಂಡರ್ರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶಕಲ್ಪಿಸಲಾಗಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಡಿಸಿ ಕೋರಿದ್ದಾರೆ.
ಗ್ಯಾಸ್ ಸರಬರಾಜುನಲ್ಲಿ ಏನಾದರೂ ಸಮಸ್ಯೆ ಉಂಟಾದಲ್ಲಿ ಆಹಾರ ನೀರಿಕ್ಷಕರು/ಶಿರಸ್ತೇದಾರ್ ಅವರ ದೂರವಾಣಿ ಸಂಖ್ಯೆಗಳು ದೇವನಹಳ್ಳಿ-9449269001, ದೊಡ್ಡಬಳ್ಳಾಪುರ-9483482766, ನೆಲಮಂಗಲ-9036434552, ಹೊಸಕೋಟೆ-9902805563 ಸಂಪರ್ಕಿಸಬಹುದಾಗಿದೆ.
ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ 1955 Petroleum Products(Maintenace of Production, Storage and Supply) Order 1999 and LPG Control Order 2000 2000 ಸಂಬಂಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ…
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…