ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಅಭಾವ ಉಂಟಾಗಬಹುದು ಎಂಬ ಭೀತಿಯಿಂದ, ಸಿಲಿಂಡ ರ್ ಗಾಗಿ ಜನರು ಮುಗಿಬಿದ್ದಿದ್ದಾರೆ.

ಇಂತಹ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿಂದು ಎಲ್‌ಪಿಜಿ ಸಿಲಿಂಡರ್ ಗಾಗಿ ಇಡೀ ಗ್ರಾಮವೇ ಮುಗಿಬಿದ್ದಿರುವ ದೃಶ್ಯ ಕಂಡುಬಂದಿದೆ…

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ‌.

ಗೃಹ ಬಳಕೆ ಸಿಲಿಂಡರ್ರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶಕಲ್ಪಿಸಲಾಗಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಡಿಸಿ ಕೋರಿದ್ದಾರೆ.

ಗ್ಯಾಸ್ ಸರಬರಾಜುನಲ್ಲಿ ಏನಾದರೂ ಸಮಸ್ಯೆ ಉಂಟಾದಲ್ಲಿ ಆಹಾರ ನೀರಿಕ್ಷಕರು/ಶಿರಸ್ತೇದಾರ್ ಅವರ ದೂರವಾಣಿ ಸಂಖ್ಯೆಗಳು ದೇವನಹಳ್ಳಿ-9449269001, ದೊಡ್ಡಬಳ್ಳಾಪುರ-9483482766, ನೆಲಮಂಗಲ-9036434552, ಹೊಸಕೋಟೆ-9902805563 ಸಂಪರ್ಕಿಸಬಹುದಾಗಿದೆ.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ 1955 Petroleum Products(Maintenace of Production, Storage and Supply) Order 1999 and LPG Control Order 2000  2000 ಸಂಬಂಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago