ಎಲ್ಲರನ್ನೂ ಸಮಾನರಾಗಿ ಕಾಣುತ್ತೇನೆ, ಎಲ್ಲರನ್ನೂ ಒಂದಾಗಿ ಕರೆದೊಯ್ಯುತ್ತೇನೆ- ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಇಂದು ನಾಮಪತ್ರ ಸಲ್ಲಿಸಿದ್ದು, ಎಲ್ಲ ಸಮುದಾಯಗಳನ್ನು ಒಂದಾಗಿ ಕರೆದೊಯ್ಯುವ ಸಂದೇಶವನ್ನು ಸಾರಿದ್ದಾರೆ.

ಬೆಳಗ್ಗೆ ದೇವನಹಳ್ಳಿಗೆ ತೆರಳಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಮನ ಸಲ್ಲಿಸಿದ ಅವರು ವಿಕಸಿತ ಚಿಕ್ಕಬಳ್ಳಾಪುರವನ್ನು ನಿರ್ಮಿಸುವ ಸಂಕಲ್ಪ ಮಾಡಿದರು. ಬಳಿಕ ಚಿಕ್ಕಬಳ್ಳಾಪುರದ ಯೋಗಿನಾರೇಯಣ ದೇವಸ್ಥಾನಕ್ಕೆ ಭೇಟಿ ನೀಡಿ ಬ್ರಹ್ಮಜ್ಞಾನಿ ಕೈವಾರ ತಾತಯ್ಯನವರ ಆಶೀರ್ವಾದ ಪಡೆದರು. ನಂತರ ವೀರಾಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ಗೋಪೂಜೆ ನೆರವೇರಿಸಿದರು. ತರುವಾಯ ಜೈ ಭೀಮ್‌ ಮೆಮೊರಿಯಲ್‌ ವಿದ್ಯಾರ್ಥಿ ನಿಲಯದ ಆವರಣದ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಆಟೋ ಚಾಲಕರೊಂದಿಗೆ ಕೆಲಸ ಸಮಯ ಕಳೆದ ಕುಶಲೋಪರಿ ನಡೆಸಿದರು. ಈ ಮೂಲಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರತಿ ಸಮುದಾಯಗಳ ನಾಡಿ ಮಿಡಿತ ಅರಿತು ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಾಗಿ ಕರೆದೊಯ್ಯುವ ಸಂದೇಶವನ್ನು ಸಾರಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಚಿಕ್ಕಬಳ್ಳಾಪುರದ ಮಾಜಿ ಕಾಂಗ್ರೆಸ್‌ ಶಾಸಕ ಎಂ.ಶಿವಾನಂದ್‌ ಅವರು ತಮ್ಮ ಬೆಂಬಲಿಗರೊಂದಿಗೆ ಡಾ.ಕೆ.ಸುಧಾಕರ್‌ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿಗೆ ಮುನ್ನ ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಕಾಂಗ್ರೆಸ್‌ಗೆ ಇನ್ನಷ್ಟು ಶಾಕ್‌ ಆಗಿದೆ.

*ಸುಧಾಕರ್‌ ಉತ್ತಮ ವಾಗ್ಮಿ: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ*

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಆಗಿರುವುದು ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ನರೇಂದ್ರ ಮೋದಿಯಂತಹ ಸುಭದ್ರ ನಾಯಕನನ್ನು ನೀಡಲು ನಾವು ಶ್ರಮಿಸುತ್ತಿದ್ದೇವೆ. ಡಾ.ಕೆ.ಸುಧಾಕರ್‌ ಅವರನ್ನು ಆಶೀರ್ವದಿಸಲು ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಬಂದಿದ್ದಾರೆ. ಡಾ.ಕೆ.ಸುಧಾಕರ್‌ ಅವರು *ಕ್ರಿಯಾಶೀಲ, ಅಭಿವೃದ್ಧಿಯ ಚಿಂತನೆ, ಉತ್ತಮ ವಾಗ್ಮಿ ಹಾಗೂ ಸಂಸತ್ತಿಗೆ ಹೋಗುವಂತಹ ಎಲ್ಲ ಅರ್ಹತೆ* ಗಳಿಸಿರುವವರಾಗಿದ್ದಾರೆ. ಅವರನ್ನು ಗೆಲ್ಲಿಸಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

*ಎಲ್ಲರನ್ನೂ ಸಮಾನರಾಗಿ ಕಾಣುತ್ತೇನೆ; ಭಾವುಕರಾದ ಸುಧಾಕರ್‌*

ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮಾತನಾಡಿ, ಬಯಲುಸೀಮೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಬೇಕಿದೆ. ನಾವು ಮತ್ತು ಜೆಡಿಎಸ್‌ ಸೇರಿ ಖಂಡಿತವಾಗಿ ಉತ್ತಮ ಯೋಜನೆ ನೀಡುತ್ತೇವೆ. ಎಚ್‌ಎನ್‌ ವ್ಯಾಲಿ, ಕೆಸಿ ವ್ಯಾಲಿ ತೃತೀಯ ಹಂತದ ಯೋಜನೆಗೆ ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿದ್ದು, ಅದನ್ನು ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿಲ್ಲ. ಕಾಂಗ್ರೆಸ್‌ ನಾಯಕರು ಯಾವುದೇ ಅಭಿವೃದ್ಧಿ ಮಾಡಿಲ್ಲವಾದ್ದರಿಂದ ಕೇವಲ ನಿಂದನೆಯ ಮೂಲಕ ಉತ್ತರ ಕೊಡುತ್ತಿದ್ದಾರೆ. ನಾನು ಸಾಮಾನ್ಯ ರೈತನ ಮನೆಯಲ್ಲಿ ಹುಟ್ಟಿ ಬಂದಿದ್ದೇನೆ. ನಾನು ಸಾಮಾನ್ಯ ಮೇಷ್ಟರ ಮಗ. ಸಮಾಜವನ್ನು ತಿದ್ದುವ ಮೇಷ್ಟರ ಮಗನಾಗಿ ಬೆಳೆದಿದ್ದೇನೆ ಎಂದರು.

ನಾನು ಜಾತಿ ರಾಜಕಾರಣ ಮಾಡಿಲ್ಲ. ಆದರೆ ಕಾಂಗ್ರೆಸ್‌ನವರು ಜಾತಿಯನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಒಬ್ಬ *ಒಕ್ಕಲಿಗ ಎಂದರೆ ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಅನ್ನದಾತ* ಎನ್ನುತ್ತಾರೆ. ನಾನು ಎಲ್ಲ ಮತದಾರರನ್ನು ಸಮಾನವಾಗಿ ಕಾಣುತ್ತೇನೆ. ಕಳೆದ 10 ತಿಂಗಳಲ್ಲಿ ನಾನು ಅಜ್ಞಾತವಾಸ ಅನುಭವಿಸಿದ್ದೇನೆ. ನಾನೇನೂ ತಪ್ಪು ಮಾಡಿಲ್ಲ. ಜನರ ಸೇವೆಯನ್ನು ನಾನು ಮಗನಂತೆ ಮಾಡುತ್ತೇನೆ ಎಂದು ಹೇಳಿ ಭಾವುಕರಾದರು.

ಮಾಜಿ ಸಚಿವರಾದ ಎಂಟಿಬಿ ನಾಗರಾಜ್‌, ಬೈರತಿ ಬಸವರಾಜು, ಶಾಸಕ ಧೀರಜ್‌ ಮುನಿರಾಜು, ಸಂಸದ ಮುನಿಸ್ವಾಮಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 hour ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

6 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago