ಎಲ್ಲರನ್ನೂ ಸಮಾನರಾಗಿ ಕಾಣುತ್ತೇನೆ, ಎಲ್ಲರನ್ನೂ ಒಂದಾಗಿ ಕರೆದೊಯ್ಯುತ್ತೇನೆ- ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಇಂದು ನಾಮಪತ್ರ ಸಲ್ಲಿಸಿದ್ದು, ಎಲ್ಲ ಸಮುದಾಯಗಳನ್ನು ಒಂದಾಗಿ ಕರೆದೊಯ್ಯುವ ಸಂದೇಶವನ್ನು ಸಾರಿದ್ದಾರೆ.

ಬೆಳಗ್ಗೆ ದೇವನಹಳ್ಳಿಗೆ ತೆರಳಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಮನ ಸಲ್ಲಿಸಿದ ಅವರು ವಿಕಸಿತ ಚಿಕ್ಕಬಳ್ಳಾಪುರವನ್ನು ನಿರ್ಮಿಸುವ ಸಂಕಲ್ಪ ಮಾಡಿದರು. ಬಳಿಕ ಚಿಕ್ಕಬಳ್ಳಾಪುರದ ಯೋಗಿನಾರೇಯಣ ದೇವಸ್ಥಾನಕ್ಕೆ ಭೇಟಿ ನೀಡಿ ಬ್ರಹ್ಮಜ್ಞಾನಿ ಕೈವಾರ ತಾತಯ್ಯನವರ ಆಶೀರ್ವಾದ ಪಡೆದರು. ನಂತರ ವೀರಾಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ಗೋಪೂಜೆ ನೆರವೇರಿಸಿದರು. ತರುವಾಯ ಜೈ ಭೀಮ್‌ ಮೆಮೊರಿಯಲ್‌ ವಿದ್ಯಾರ್ಥಿ ನಿಲಯದ ಆವರಣದ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಆಟೋ ಚಾಲಕರೊಂದಿಗೆ ಕೆಲಸ ಸಮಯ ಕಳೆದ ಕುಶಲೋಪರಿ ನಡೆಸಿದರು. ಈ ಮೂಲಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರತಿ ಸಮುದಾಯಗಳ ನಾಡಿ ಮಿಡಿತ ಅರಿತು ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಾಗಿ ಕರೆದೊಯ್ಯುವ ಸಂದೇಶವನ್ನು ಸಾರಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಚಿಕ್ಕಬಳ್ಳಾಪುರದ ಮಾಜಿ ಕಾಂಗ್ರೆಸ್‌ ಶಾಸಕ ಎಂ.ಶಿವಾನಂದ್‌ ಅವರು ತಮ್ಮ ಬೆಂಬಲಿಗರೊಂದಿಗೆ ಡಾ.ಕೆ.ಸುಧಾಕರ್‌ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿಗೆ ಮುನ್ನ ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಕಾಂಗ್ರೆಸ್‌ಗೆ ಇನ್ನಷ್ಟು ಶಾಕ್‌ ಆಗಿದೆ.

*ಸುಧಾಕರ್‌ ಉತ್ತಮ ವಾಗ್ಮಿ: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ*

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಆಗಿರುವುದು ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ನರೇಂದ್ರ ಮೋದಿಯಂತಹ ಸುಭದ್ರ ನಾಯಕನನ್ನು ನೀಡಲು ನಾವು ಶ್ರಮಿಸುತ್ತಿದ್ದೇವೆ. ಡಾ.ಕೆ.ಸುಧಾಕರ್‌ ಅವರನ್ನು ಆಶೀರ್ವದಿಸಲು ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಬಂದಿದ್ದಾರೆ. ಡಾ.ಕೆ.ಸುಧಾಕರ್‌ ಅವರು *ಕ್ರಿಯಾಶೀಲ, ಅಭಿವೃದ್ಧಿಯ ಚಿಂತನೆ, ಉತ್ತಮ ವಾಗ್ಮಿ ಹಾಗೂ ಸಂಸತ್ತಿಗೆ ಹೋಗುವಂತಹ ಎಲ್ಲ ಅರ್ಹತೆ* ಗಳಿಸಿರುವವರಾಗಿದ್ದಾರೆ. ಅವರನ್ನು ಗೆಲ್ಲಿಸಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

*ಎಲ್ಲರನ್ನೂ ಸಮಾನರಾಗಿ ಕಾಣುತ್ತೇನೆ; ಭಾವುಕರಾದ ಸುಧಾಕರ್‌*

ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮಾತನಾಡಿ, ಬಯಲುಸೀಮೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಬೇಕಿದೆ. ನಾವು ಮತ್ತು ಜೆಡಿಎಸ್‌ ಸೇರಿ ಖಂಡಿತವಾಗಿ ಉತ್ತಮ ಯೋಜನೆ ನೀಡುತ್ತೇವೆ. ಎಚ್‌ಎನ್‌ ವ್ಯಾಲಿ, ಕೆಸಿ ವ್ಯಾಲಿ ತೃತೀಯ ಹಂತದ ಯೋಜನೆಗೆ ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿದ್ದು, ಅದನ್ನು ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿಲ್ಲ. ಕಾಂಗ್ರೆಸ್‌ ನಾಯಕರು ಯಾವುದೇ ಅಭಿವೃದ್ಧಿ ಮಾಡಿಲ್ಲವಾದ್ದರಿಂದ ಕೇವಲ ನಿಂದನೆಯ ಮೂಲಕ ಉತ್ತರ ಕೊಡುತ್ತಿದ್ದಾರೆ. ನಾನು ಸಾಮಾನ್ಯ ರೈತನ ಮನೆಯಲ್ಲಿ ಹುಟ್ಟಿ ಬಂದಿದ್ದೇನೆ. ನಾನು ಸಾಮಾನ್ಯ ಮೇಷ್ಟರ ಮಗ. ಸಮಾಜವನ್ನು ತಿದ್ದುವ ಮೇಷ್ಟರ ಮಗನಾಗಿ ಬೆಳೆದಿದ್ದೇನೆ ಎಂದರು.

ನಾನು ಜಾತಿ ರಾಜಕಾರಣ ಮಾಡಿಲ್ಲ. ಆದರೆ ಕಾಂಗ್ರೆಸ್‌ನವರು ಜಾತಿಯನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಒಬ್ಬ *ಒಕ್ಕಲಿಗ ಎಂದರೆ ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಅನ್ನದಾತ* ಎನ್ನುತ್ತಾರೆ. ನಾನು ಎಲ್ಲ ಮತದಾರರನ್ನು ಸಮಾನವಾಗಿ ಕಾಣುತ್ತೇನೆ. ಕಳೆದ 10 ತಿಂಗಳಲ್ಲಿ ನಾನು ಅಜ್ಞಾತವಾಸ ಅನುಭವಿಸಿದ್ದೇನೆ. ನಾನೇನೂ ತಪ್ಪು ಮಾಡಿಲ್ಲ. ಜನರ ಸೇವೆಯನ್ನು ನಾನು ಮಗನಂತೆ ಮಾಡುತ್ತೇನೆ ಎಂದು ಹೇಳಿ ಭಾವುಕರಾದರು.

ಮಾಜಿ ಸಚಿವರಾದ ಎಂಟಿಬಿ ನಾಗರಾಜ್‌, ಬೈರತಿ ಬಸವರಾಜು, ಶಾಸಕ ಧೀರಜ್‌ ಮುನಿರಾಜು, ಸಂಸದ ಮುನಿಸ್ವಾಮಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

13 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

14 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

19 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago