ಎಲ್ಲರನ್ನೂ ಸಮಾನರಾಗಿ ಕಾಣುತ್ತೇನೆ, ಎಲ್ಲರನ್ನೂ ಒಂದಾಗಿ ಕರೆದೊಯ್ಯುತ್ತೇನೆ- ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಇಂದು ನಾಮಪತ್ರ ಸಲ್ಲಿಸಿದ್ದು, ಎಲ್ಲ ಸಮುದಾಯಗಳನ್ನು ಒಂದಾಗಿ ಕರೆದೊಯ್ಯುವ ಸಂದೇಶವನ್ನು ಸಾರಿದ್ದಾರೆ.

ಬೆಳಗ್ಗೆ ದೇವನಹಳ್ಳಿಗೆ ತೆರಳಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಮನ ಸಲ್ಲಿಸಿದ ಅವರು ವಿಕಸಿತ ಚಿಕ್ಕಬಳ್ಳಾಪುರವನ್ನು ನಿರ್ಮಿಸುವ ಸಂಕಲ್ಪ ಮಾಡಿದರು. ಬಳಿಕ ಚಿಕ್ಕಬಳ್ಳಾಪುರದ ಯೋಗಿನಾರೇಯಣ ದೇವಸ್ಥಾನಕ್ಕೆ ಭೇಟಿ ನೀಡಿ ಬ್ರಹ್ಮಜ್ಞಾನಿ ಕೈವಾರ ತಾತಯ್ಯನವರ ಆಶೀರ್ವಾದ ಪಡೆದರು. ನಂತರ ವೀರಾಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ಗೋಪೂಜೆ ನೆರವೇರಿಸಿದರು. ತರುವಾಯ ಜೈ ಭೀಮ್‌ ಮೆಮೊರಿಯಲ್‌ ವಿದ್ಯಾರ್ಥಿ ನಿಲಯದ ಆವರಣದ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಆಟೋ ಚಾಲಕರೊಂದಿಗೆ ಕೆಲಸ ಸಮಯ ಕಳೆದ ಕುಶಲೋಪರಿ ನಡೆಸಿದರು. ಈ ಮೂಲಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರತಿ ಸಮುದಾಯಗಳ ನಾಡಿ ಮಿಡಿತ ಅರಿತು ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಾಗಿ ಕರೆದೊಯ್ಯುವ ಸಂದೇಶವನ್ನು ಸಾರಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಚಿಕ್ಕಬಳ್ಳಾಪುರದ ಮಾಜಿ ಕಾಂಗ್ರೆಸ್‌ ಶಾಸಕ ಎಂ.ಶಿವಾನಂದ್‌ ಅವರು ತಮ್ಮ ಬೆಂಬಲಿಗರೊಂದಿಗೆ ಡಾ.ಕೆ.ಸುಧಾಕರ್‌ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿಗೆ ಮುನ್ನ ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಕಾಂಗ್ರೆಸ್‌ಗೆ ಇನ್ನಷ್ಟು ಶಾಕ್‌ ಆಗಿದೆ.

*ಸುಧಾಕರ್‌ ಉತ್ತಮ ವಾಗ್ಮಿ: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ*

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಆಗಿರುವುದು ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ನರೇಂದ್ರ ಮೋದಿಯಂತಹ ಸುಭದ್ರ ನಾಯಕನನ್ನು ನೀಡಲು ನಾವು ಶ್ರಮಿಸುತ್ತಿದ್ದೇವೆ. ಡಾ.ಕೆ.ಸುಧಾಕರ್‌ ಅವರನ್ನು ಆಶೀರ್ವದಿಸಲು ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಬಂದಿದ್ದಾರೆ. ಡಾ.ಕೆ.ಸುಧಾಕರ್‌ ಅವರು *ಕ್ರಿಯಾಶೀಲ, ಅಭಿವೃದ್ಧಿಯ ಚಿಂತನೆ, ಉತ್ತಮ ವಾಗ್ಮಿ ಹಾಗೂ ಸಂಸತ್ತಿಗೆ ಹೋಗುವಂತಹ ಎಲ್ಲ ಅರ್ಹತೆ* ಗಳಿಸಿರುವವರಾಗಿದ್ದಾರೆ. ಅವರನ್ನು ಗೆಲ್ಲಿಸಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

*ಎಲ್ಲರನ್ನೂ ಸಮಾನರಾಗಿ ಕಾಣುತ್ತೇನೆ; ಭಾವುಕರಾದ ಸುಧಾಕರ್‌*

ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮಾತನಾಡಿ, ಬಯಲುಸೀಮೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಬೇಕಿದೆ. ನಾವು ಮತ್ತು ಜೆಡಿಎಸ್‌ ಸೇರಿ ಖಂಡಿತವಾಗಿ ಉತ್ತಮ ಯೋಜನೆ ನೀಡುತ್ತೇವೆ. ಎಚ್‌ಎನ್‌ ವ್ಯಾಲಿ, ಕೆಸಿ ವ್ಯಾಲಿ ತೃತೀಯ ಹಂತದ ಯೋಜನೆಗೆ ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿದ್ದು, ಅದನ್ನು ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿಲ್ಲ. ಕಾಂಗ್ರೆಸ್‌ ನಾಯಕರು ಯಾವುದೇ ಅಭಿವೃದ್ಧಿ ಮಾಡಿಲ್ಲವಾದ್ದರಿಂದ ಕೇವಲ ನಿಂದನೆಯ ಮೂಲಕ ಉತ್ತರ ಕೊಡುತ್ತಿದ್ದಾರೆ. ನಾನು ಸಾಮಾನ್ಯ ರೈತನ ಮನೆಯಲ್ಲಿ ಹುಟ್ಟಿ ಬಂದಿದ್ದೇನೆ. ನಾನು ಸಾಮಾನ್ಯ ಮೇಷ್ಟರ ಮಗ. ಸಮಾಜವನ್ನು ತಿದ್ದುವ ಮೇಷ್ಟರ ಮಗನಾಗಿ ಬೆಳೆದಿದ್ದೇನೆ ಎಂದರು.

ನಾನು ಜಾತಿ ರಾಜಕಾರಣ ಮಾಡಿಲ್ಲ. ಆದರೆ ಕಾಂಗ್ರೆಸ್‌ನವರು ಜಾತಿಯನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಒಬ್ಬ *ಒಕ್ಕಲಿಗ ಎಂದರೆ ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಅನ್ನದಾತ* ಎನ್ನುತ್ತಾರೆ. ನಾನು ಎಲ್ಲ ಮತದಾರರನ್ನು ಸಮಾನವಾಗಿ ಕಾಣುತ್ತೇನೆ. ಕಳೆದ 10 ತಿಂಗಳಲ್ಲಿ ನಾನು ಅಜ್ಞಾತವಾಸ ಅನುಭವಿಸಿದ್ದೇನೆ. ನಾನೇನೂ ತಪ್ಪು ಮಾಡಿಲ್ಲ. ಜನರ ಸೇವೆಯನ್ನು ನಾನು ಮಗನಂತೆ ಮಾಡುತ್ತೇನೆ ಎಂದು ಹೇಳಿ ಭಾವುಕರಾದರು.

ಮಾಜಿ ಸಚಿವರಾದ ಎಂಟಿಬಿ ನಾಗರಾಜ್‌, ಬೈರತಿ ಬಸವರಾಜು, ಶಾಸಕ ಧೀರಜ್‌ ಮುನಿರಾಜು, ಸಂಸದ ಮುನಿಸ್ವಾಮಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

12 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago