ತಂದೆ ಡ್ರೈವರ್, ಮಗಳು ಓದುವ ಶಾಲೆಯಲ್ಲಿ ತಾಯಿ ಸಹಾಯಕಿ, ಆ‌ ಶಾಲೆಯಲ್ಲೇ ಮಗಳು ಓದಿ sslc ಟಾಪರ್ : ಬಡ ಕುಟುಂಬದ ಮಗಳು ದೊಡ್ಡಬಳ್ಳಾಪುರಕ್ಕೆ ಟಾಪರ್ ವಿದ್ಯಾರ್ಥಿನಿ: ಎಲ್ಲರಿಗೂ ಸ್ಫೂರ್ತಿಯಂತಿರುವ ಎ.ಸ್ಫೂರ್ತಿ

2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625‌ ಅಂಕಗಳಿಗೆ 618 ಅಂಕ ಪಡೆದು ಶೇ.98.88 ಫಲಿತಾಂಶದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ಎಸ್ ಜೆ‌ ಸಿ ಆರ್ ಶಾಲಾ ವಿದ್ಯಾರ್ಥಿನಿ ಎ.ಸ್ಫೂರ್ತಿ.

ಮೇ.8ರಂದು‌ 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಎ.ಸ್ಫೂರ್ತಿ ಪಾತ್ರರಾಗಿದ್ದಾರೆ.

ನನ್ನ ಮಗಳು ಮೊದಲಿನಿಂದಲೂ ಓದಿನಲ್ಲಿ ಮುಂದೆ ಇರುವುದು ಗೊತ್ತಿತ್ತು, ಅದನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಹೆಚ್ಚು ಅಂಕ ಪಡೆಯುವ ಮೂಲಕ ಸಾಬೀತುಪಡಿಸಿದ್ದಾಳೆ. ನನ್ನ ಮಗಳ ಬಗ್ಗೆ ನನಗೆ ಹೆಮ್ಮೆ ಇದೆ. ಅವಳು ಎಲ್ಲಿಯವರೆಗೆ ವಿದ್ಯಾಭ್ಯಾಸ ಮುಂದುವರಿಸುತ್ತಾಳೋ ಅಲ್ಲಿಯವರೆಗೆ ಓದಿಸಿ ಒಳ್ಳೆ ಅಧಿಕಾರಿಯನ್ನಾಗಿ ಮಾಡುತ್ತೇನೆ. ಹೆಸರಲ್ಲೇ ಇದೆ ಸ್ಫೂರ್ತಿ, ಇನ್ನೊಬ್ಬರಿಗೆ ಸ್ಫೂರ್ತಿ ಆಗುತ್ತಾಳೆ ಎಂಬ ನಂಬಿಕೆ ಇದೆ ಎಂದು ಟಾಪರ್ ಎ.ಸ್ಫೂರ್ತಿ ತಂದೆ ಆನಂದ್ ಮಗಳ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.

ಮನೆಯಲ್ಲಿ ಸ್ಫೂರ್ತಿಗೆ ತಾಯಿಯೇ ಮೊದಲ ಗುರು. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು‌ ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ‌ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾಳೆ ಎಂದರು.

ನಂತರ ತಾಯಿ‌ ನಾಗರತ್ನ ಮಾತನಾಡಿ, ನಾನು ನನ್ನ ಮಗಳು ಓದುವ ಶಾಲೆಯಲ್ಲೇ ಸಹಾಯಕಿಯಾಗಿ ಕೆಲಸ ಮಾಡುತ್ತಾನೆ. ನನ್ನ ಮಗಳ ಬಗ್ಗೆ ನನಗೆ ಬಹಳ ಹೆಮ್ಮೆ‌ ಇದೆ. ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ ಎಂದು ಖುಷಿಪಟ್ಟರು.

ನಂತರ ವಿದ್ಯಾರ್ಥಿನಿ ಎ.ಸ್ಫೂರ್ತಿ ಮಾತನಾಡಿ, ಶಾಲಾ ಶಿಕ್ಷಕರು, ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ‌ ಮಾಡಲು ಸಾಧ್ಯವಾಯಿತು. ನಾನು ಚೆನ್ನಾಗಿ ಓದಿ, ತಂದೆ- ತಾಯಿಗೆ ಒಂದೊಳ್ಳೆ ಗೌರವ ತರಬೇಕು ಎಂದು ಹಠದಿಂದ ಪ್ರತಿ ದಿನ ಅಭ್ಯಾಸ ಮಾಡುತ್ತಿದ್ದೆ. ಅದರ ಪ್ರತಿಫಲ ದಕ್ಕಿದೆ. ಇನ್ನೂ ಅದೇರೀತಿ ಕಠಿಣ ಅಭ್ಯಾಸ ಮಾಡುವ ಮೂಲಕ ಉನ್ನತ ವಿದ್ಯಾಭ್ಯಾ ಮಾಡಿ ಅಧಿಕಾರಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವೆ, ತಂದೆ ತಾಯಿಯನ್ನು ಚೆನ್ನಾಗಿ ನೋಡಿಕಳ್ಳುತ್ತೇನೆ. ನಮ್ಮ ಪೋಷಕರಿಗೆ ಇಬ್ಬರೂ ಹೆಣ್ಣುಮಕ್ಕಳು, ಗಂಡು ಮಗು ಇಲ್ಲ ಆದ್ದರಿಂದ ಎಲ್ಲಾ ನಾವೆ ಅವರಿಗೆ ಆದ್ದರಿಂದ ಅವರನ್ನು ಖುಷಿಯಿಂದ ಇಡಲು ಪ್ರಯತ್ನಿಸುವೆ. ಮುಂದೆ ಸಿಎ ಮಾಡುವೆ ಎಂದು ತಿಳಿಸಿದರು.

ಮಗಳ ಸಾಧನೆಯಿಂದ ಪೋಷಕರ ಕಣ್ಣಂಚಿನಲ್ಲಿ ಆನಂದಭಾಷ್ಪ ಎದ್ದು ಕಾಣುತ್ತಿತ್ತು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

11 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

12 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

24 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago