ತಂದೆ ಡ್ರೈವರ್, ಮಗಳು ಓದುವ ಶಾಲೆಯಲ್ಲಿ ತಾಯಿ ಸಹಾಯಕಿ, ಆ‌ ಶಾಲೆಯಲ್ಲೇ ಮಗಳು ಓದಿ sslc ಟಾಪರ್ : ಬಡ ಕುಟುಂಬದ ಮಗಳು ದೊಡ್ಡಬಳ್ಳಾಪುರಕ್ಕೆ ಟಾಪರ್ ವಿದ್ಯಾರ್ಥಿನಿ: ಎಲ್ಲರಿಗೂ ಸ್ಫೂರ್ತಿಯಂತಿರುವ ಎ.ಸ್ಫೂರ್ತಿ

2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625‌ ಅಂಕಗಳಿಗೆ 618 ಅಂಕ ಪಡೆದು ಶೇ.98.88 ಫಲಿತಾಂಶದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ಎಸ್ ಜೆ‌ ಸಿ ಆರ್ ಶಾಲಾ ವಿದ್ಯಾರ್ಥಿನಿ ಎ.ಸ್ಫೂರ್ತಿ.

ಮೇ.8ರಂದು‌ 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಎ.ಸ್ಫೂರ್ತಿ ಪಾತ್ರರಾಗಿದ್ದಾರೆ.

ನನ್ನ ಮಗಳು ಮೊದಲಿನಿಂದಲೂ ಓದಿನಲ್ಲಿ ಮುಂದೆ ಇರುವುದು ಗೊತ್ತಿತ್ತು, ಅದನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಹೆಚ್ಚು ಅಂಕ ಪಡೆಯುವ ಮೂಲಕ ಸಾಬೀತುಪಡಿಸಿದ್ದಾಳೆ. ನನ್ನ ಮಗಳ ಬಗ್ಗೆ ನನಗೆ ಹೆಮ್ಮೆ ಇದೆ. ಅವಳು ಎಲ್ಲಿಯವರೆಗೆ ವಿದ್ಯಾಭ್ಯಾಸ ಮುಂದುವರಿಸುತ್ತಾಳೋ ಅಲ್ಲಿಯವರೆಗೆ ಓದಿಸಿ ಒಳ್ಳೆ ಅಧಿಕಾರಿಯನ್ನಾಗಿ ಮಾಡುತ್ತೇನೆ. ಹೆಸರಲ್ಲೇ ಇದೆ ಸ್ಫೂರ್ತಿ, ಇನ್ನೊಬ್ಬರಿಗೆ ಸ್ಫೂರ್ತಿ ಆಗುತ್ತಾಳೆ ಎಂಬ ನಂಬಿಕೆ ಇದೆ ಎಂದು ಟಾಪರ್ ಎ.ಸ್ಫೂರ್ತಿ ತಂದೆ ಆನಂದ್ ಮಗಳ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.

ಮನೆಯಲ್ಲಿ ಸ್ಫೂರ್ತಿಗೆ ತಾಯಿಯೇ ಮೊದಲ ಗುರು. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು‌ ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ‌ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾಳೆ ಎಂದರು.

ನಂತರ ತಾಯಿ‌ ನಾಗರತ್ನ ಮಾತನಾಡಿ, ನಾನು ನನ್ನ ಮಗಳು ಓದುವ ಶಾಲೆಯಲ್ಲೇ ಸಹಾಯಕಿಯಾಗಿ ಕೆಲಸ ಮಾಡುತ್ತಾನೆ. ನನ್ನ ಮಗಳ ಬಗ್ಗೆ ನನಗೆ ಬಹಳ ಹೆಮ್ಮೆ‌ ಇದೆ. ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ ಎಂದು ಖುಷಿಪಟ್ಟರು.

ನಂತರ ವಿದ್ಯಾರ್ಥಿನಿ ಎ.ಸ್ಫೂರ್ತಿ ಮಾತನಾಡಿ, ಶಾಲಾ ಶಿಕ್ಷಕರು, ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ‌ ಮಾಡಲು ಸಾಧ್ಯವಾಯಿತು. ನಾನು ಚೆನ್ನಾಗಿ ಓದಿ, ತಂದೆ- ತಾಯಿಗೆ ಒಂದೊಳ್ಳೆ ಗೌರವ ತರಬೇಕು ಎಂದು ಹಠದಿಂದ ಪ್ರತಿ ದಿನ ಅಭ್ಯಾಸ ಮಾಡುತ್ತಿದ್ದೆ. ಅದರ ಪ್ರತಿಫಲ ದಕ್ಕಿದೆ. ಇನ್ನೂ ಅದೇರೀತಿ ಕಠಿಣ ಅಭ್ಯಾಸ ಮಾಡುವ ಮೂಲಕ ಉನ್ನತ ವಿದ್ಯಾಭ್ಯಾ ಮಾಡಿ ಅಧಿಕಾರಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವೆ, ತಂದೆ ತಾಯಿಯನ್ನು ಚೆನ್ನಾಗಿ ನೋಡಿಕಳ್ಳುತ್ತೇನೆ. ನಮ್ಮ ಪೋಷಕರಿಗೆ ಇಬ್ಬರೂ ಹೆಣ್ಣುಮಕ್ಕಳು, ಗಂಡು ಮಗು ಇಲ್ಲ ಆದ್ದರಿಂದ ಎಲ್ಲಾ ನಾವೆ ಅವರಿಗೆ ಆದ್ದರಿಂದ ಅವರನ್ನು ಖುಷಿಯಿಂದ ಇಡಲು ಪ್ರಯತ್ನಿಸುವೆ. ಮುಂದೆ ಸಿಎ ಮಾಡುವೆ ಎಂದು ತಿಳಿಸಿದರು.

ಮಗಳ ಸಾಧನೆಯಿಂದ ಪೋಷಕರ ಕಣ್ಣಂಚಿನಲ್ಲಿ ಆನಂದಭಾಷ್ಪ ಎದ್ದು ಕಾಣುತ್ತಿತ್ತು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

14 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

22 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago