ತಂದೆ ಡ್ರೈವರ್, ಮಗಳು ಓದುವ ಶಾಲೆಯಲ್ಲಿ ತಾಯಿ ಸಹಾಯಕಿ, ಆ‌ ಶಾಲೆಯಲ್ಲೇ ಮಗಳು ಓದಿ sslc ಟಾಪರ್ : ಬಡ ಕುಟುಂಬದ ಮಗಳು ದೊಡ್ಡಬಳ್ಳಾಪುರಕ್ಕೆ ಟಾಪರ್ ವಿದ್ಯಾರ್ಥಿನಿ: ಎಲ್ಲರಿಗೂ ಸ್ಫೂರ್ತಿಯಂತಿರುವ ಎ.ಸ್ಫೂರ್ತಿ

2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625‌ ಅಂಕಗಳಿಗೆ 618 ಅಂಕ ಪಡೆದು ಶೇ.98.88 ಫಲಿತಾಂಶದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ಎಸ್ ಜೆ‌ ಸಿ ಆರ್ ಶಾಲಾ ವಿದ್ಯಾರ್ಥಿನಿ ಎ.ಸ್ಫೂರ್ತಿ.

ಮೇ.8ರಂದು‌ 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಎ.ಸ್ಫೂರ್ತಿ ಪಾತ್ರರಾಗಿದ್ದಾರೆ.

ನನ್ನ ಮಗಳು ಮೊದಲಿನಿಂದಲೂ ಓದಿನಲ್ಲಿ ಮುಂದೆ ಇರುವುದು ಗೊತ್ತಿತ್ತು, ಅದನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಹೆಚ್ಚು ಅಂಕ ಪಡೆಯುವ ಮೂಲಕ ಸಾಬೀತುಪಡಿಸಿದ್ದಾಳೆ. ನನ್ನ ಮಗಳ ಬಗ್ಗೆ ನನಗೆ ಹೆಮ್ಮೆ ಇದೆ. ಅವಳು ಎಲ್ಲಿಯವರೆಗೆ ವಿದ್ಯಾಭ್ಯಾಸ ಮುಂದುವರಿಸುತ್ತಾಳೋ ಅಲ್ಲಿಯವರೆಗೆ ಓದಿಸಿ ಒಳ್ಳೆ ಅಧಿಕಾರಿಯನ್ನಾಗಿ ಮಾಡುತ್ತೇನೆ. ಹೆಸರಲ್ಲೇ ಇದೆ ಸ್ಫೂರ್ತಿ, ಇನ್ನೊಬ್ಬರಿಗೆ ಸ್ಫೂರ್ತಿ ಆಗುತ್ತಾಳೆ ಎಂಬ ನಂಬಿಕೆ ಇದೆ ಎಂದು ಟಾಪರ್ ಎ.ಸ್ಫೂರ್ತಿ ತಂದೆ ಆನಂದ್ ಮಗಳ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.

ಮನೆಯಲ್ಲಿ ಸ್ಫೂರ್ತಿಗೆ ತಾಯಿಯೇ ಮೊದಲ ಗುರು. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು‌ ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ‌ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾಳೆ ಎಂದರು.

ನಂತರ ತಾಯಿ‌ ನಾಗರತ್ನ ಮಾತನಾಡಿ, ನಾನು ನನ್ನ ಮಗಳು ಓದುವ ಶಾಲೆಯಲ್ಲೇ ಸಹಾಯಕಿಯಾಗಿ ಕೆಲಸ ಮಾಡುತ್ತಾನೆ. ನನ್ನ ಮಗಳ ಬಗ್ಗೆ ನನಗೆ ಬಹಳ ಹೆಮ್ಮೆ‌ ಇದೆ. ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ ಎಂದು ಖುಷಿಪಟ್ಟರು.

ನಂತರ ವಿದ್ಯಾರ್ಥಿನಿ ಎ.ಸ್ಫೂರ್ತಿ ಮಾತನಾಡಿ, ಶಾಲಾ ಶಿಕ್ಷಕರು, ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ‌ ಮಾಡಲು ಸಾಧ್ಯವಾಯಿತು. ನಾನು ಚೆನ್ನಾಗಿ ಓದಿ, ತಂದೆ- ತಾಯಿಗೆ ಒಂದೊಳ್ಳೆ ಗೌರವ ತರಬೇಕು ಎಂದು ಹಠದಿಂದ ಪ್ರತಿ ದಿನ ಅಭ್ಯಾಸ ಮಾಡುತ್ತಿದ್ದೆ. ಅದರ ಪ್ರತಿಫಲ ದಕ್ಕಿದೆ. ಇನ್ನೂ ಅದೇರೀತಿ ಕಠಿಣ ಅಭ್ಯಾಸ ಮಾಡುವ ಮೂಲಕ ಉನ್ನತ ವಿದ್ಯಾಭ್ಯಾ ಮಾಡಿ ಅಧಿಕಾರಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವೆ, ತಂದೆ ತಾಯಿಯನ್ನು ಚೆನ್ನಾಗಿ ನೋಡಿಕಳ್ಳುತ್ತೇನೆ. ನಮ್ಮ ಪೋಷಕರಿಗೆ ಇಬ್ಬರೂ ಹೆಣ್ಣುಮಕ್ಕಳು, ಗಂಡು ಮಗು ಇಲ್ಲ ಆದ್ದರಿಂದ ಎಲ್ಲಾ ನಾವೆ ಅವರಿಗೆ ಆದ್ದರಿಂದ ಅವರನ್ನು ಖುಷಿಯಿಂದ ಇಡಲು ಪ್ರಯತ್ನಿಸುವೆ. ಮುಂದೆ ಸಿಎ ಮಾಡುವೆ ಎಂದು ತಿಳಿಸಿದರು.

ಮಗಳ ಸಾಧನೆಯಿಂದ ಪೋಷಕರ ಕಣ್ಣಂಚಿನಲ್ಲಿ ಆನಂದಭಾಷ್ಪ ಎದ್ದು ಕಾಣುತ್ತಿತ್ತು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

19 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

24 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago