ತಂದೆ ಡ್ರೈವರ್, ಮಗಳು ಓದುವ ಶಾಲೆಯಲ್ಲಿ ತಾಯಿ ಸಹಾಯಕಿ, ಆ‌ ಶಾಲೆಯಲ್ಲೇ ಮಗಳು ಓದಿ sslc ಟಾಪರ್ : ಬಡ ಕುಟುಂಬದ ಮಗಳು ದೊಡ್ಡಬಳ್ಳಾಪುರಕ್ಕೆ ಟಾಪರ್ ವಿದ್ಯಾರ್ಥಿನಿ: ಎಲ್ಲರಿಗೂ ಸ್ಫೂರ್ತಿಯಂತಿರುವ ಎ.ಸ್ಫೂರ್ತಿ

2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625‌ ಅಂಕಗಳಿಗೆ 618 ಅಂಕ ಪಡೆದು ಶೇ.98.88 ಫಲಿತಾಂಶದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ಎಸ್ ಜೆ‌ ಸಿ ಆರ್ ಶಾಲಾ ವಿದ್ಯಾರ್ಥಿನಿ ಎ.ಸ್ಫೂರ್ತಿ.

ಮೇ.8ರಂದು‌ 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಎ.ಸ್ಫೂರ್ತಿ ಪಾತ್ರರಾಗಿದ್ದಾರೆ.

ನನ್ನ ಮಗಳು ಮೊದಲಿನಿಂದಲೂ ಓದಿನಲ್ಲಿ ಮುಂದೆ ಇರುವುದು ಗೊತ್ತಿತ್ತು, ಅದನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಹೆಚ್ಚು ಅಂಕ ಪಡೆಯುವ ಮೂಲಕ ಸಾಬೀತುಪಡಿಸಿದ್ದಾಳೆ. ನನ್ನ ಮಗಳ ಬಗ್ಗೆ ನನಗೆ ಹೆಮ್ಮೆ ಇದೆ. ಅವಳು ಎಲ್ಲಿಯವರೆಗೆ ವಿದ್ಯಾಭ್ಯಾಸ ಮುಂದುವರಿಸುತ್ತಾಳೋ ಅಲ್ಲಿಯವರೆಗೆ ಓದಿಸಿ ಒಳ್ಳೆ ಅಧಿಕಾರಿಯನ್ನಾಗಿ ಮಾಡುತ್ತೇನೆ. ಹೆಸರಲ್ಲೇ ಇದೆ ಸ್ಫೂರ್ತಿ, ಇನ್ನೊಬ್ಬರಿಗೆ ಸ್ಫೂರ್ತಿ ಆಗುತ್ತಾಳೆ ಎಂಬ ನಂಬಿಕೆ ಇದೆ ಎಂದು ಟಾಪರ್ ಎ.ಸ್ಫೂರ್ತಿ ತಂದೆ ಆನಂದ್ ಮಗಳ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.

ಮನೆಯಲ್ಲಿ ಸ್ಫೂರ್ತಿಗೆ ತಾಯಿಯೇ ಮೊದಲ ಗುರು. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು‌ ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ‌ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾಳೆ ಎಂದರು.

ನಂತರ ತಾಯಿ‌ ನಾಗರತ್ನ ಮಾತನಾಡಿ, ನಾನು ನನ್ನ ಮಗಳು ಓದುವ ಶಾಲೆಯಲ್ಲೇ ಸಹಾಯಕಿಯಾಗಿ ಕೆಲಸ ಮಾಡುತ್ತಾನೆ. ನನ್ನ ಮಗಳ ಬಗ್ಗೆ ನನಗೆ ಬಹಳ ಹೆಮ್ಮೆ‌ ಇದೆ. ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ ಎಂದು ಖುಷಿಪಟ್ಟರು.

ನಂತರ ವಿದ್ಯಾರ್ಥಿನಿ ಎ.ಸ್ಫೂರ್ತಿ ಮಾತನಾಡಿ, ಶಾಲಾ ಶಿಕ್ಷಕರು, ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ‌ ಮಾಡಲು ಸಾಧ್ಯವಾಯಿತು. ನಾನು ಚೆನ್ನಾಗಿ ಓದಿ, ತಂದೆ- ತಾಯಿಗೆ ಒಂದೊಳ್ಳೆ ಗೌರವ ತರಬೇಕು ಎಂದು ಹಠದಿಂದ ಪ್ರತಿ ದಿನ ಅಭ್ಯಾಸ ಮಾಡುತ್ತಿದ್ದೆ. ಅದರ ಪ್ರತಿಫಲ ದಕ್ಕಿದೆ. ಇನ್ನೂ ಅದೇರೀತಿ ಕಠಿಣ ಅಭ್ಯಾಸ ಮಾಡುವ ಮೂಲಕ ಉನ್ನತ ವಿದ್ಯಾಭ್ಯಾ ಮಾಡಿ ಅಧಿಕಾರಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವೆ, ತಂದೆ ತಾಯಿಯನ್ನು ಚೆನ್ನಾಗಿ ನೋಡಿಕಳ್ಳುತ್ತೇನೆ. ನಮ್ಮ ಪೋಷಕರಿಗೆ ಇಬ್ಬರೂ ಹೆಣ್ಣುಮಕ್ಕಳು, ಗಂಡು ಮಗು ಇಲ್ಲ ಆದ್ದರಿಂದ ಎಲ್ಲಾ ನಾವೆ ಅವರಿಗೆ ಆದ್ದರಿಂದ ಅವರನ್ನು ಖುಷಿಯಿಂದ ಇಡಲು ಪ್ರಯತ್ನಿಸುವೆ. ಮುಂದೆ ಸಿಎ ಮಾಡುವೆ ಎಂದು ತಿಳಿಸಿದರು.

ಮಗಳ ಸಾಧನೆಯಿಂದ ಪೋಷಕರ ಕಣ್ಣಂಚಿನಲ್ಲಿ ಆನಂದಭಾಷ್ಪ ಎದ್ದು ಕಾಣುತ್ತಿತ್ತು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

3 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

6 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

19 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

23 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago