ತಂದೆ ಡ್ರೈವರ್, ಮಗಳು ಓದುವ ಶಾಲೆಯಲ್ಲಿ ತಾಯಿ ಸಹಾಯಕಿ, ಆ‌ ಶಾಲೆಯಲ್ಲೇ ಮಗಳು ಓದಿ sslc ಟಾಪರ್ : ಬಡ ಕುಟುಂಬದ ಮಗಳು ದೊಡ್ಡಬಳ್ಳಾಪುರಕ್ಕೆ ಟಾಪರ್ ವಿದ್ಯಾರ್ಥಿನಿ: ಎಲ್ಲರಿಗೂ ಸ್ಫೂರ್ತಿಯಂತಿರುವ ಎ.ಸ್ಫೂರ್ತಿ

2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625‌ ಅಂಕಗಳಿಗೆ 618 ಅಂಕ ಪಡೆದು ಶೇ.98.88 ಫಲಿತಾಂಶದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ಎಸ್ ಜೆ‌ ಸಿ ಆರ್ ಶಾಲಾ ವಿದ್ಯಾರ್ಥಿನಿ ಎ.ಸ್ಫೂರ್ತಿ.

ಮೇ.8ರಂದು‌ 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಎ.ಸ್ಫೂರ್ತಿ ಪಾತ್ರರಾಗಿದ್ದಾರೆ.

ನನ್ನ ಮಗಳು ಮೊದಲಿನಿಂದಲೂ ಓದಿನಲ್ಲಿ ಮುಂದೆ ಇರುವುದು ಗೊತ್ತಿತ್ತು, ಅದನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಹೆಚ್ಚು ಅಂಕ ಪಡೆಯುವ ಮೂಲಕ ಸಾಬೀತುಪಡಿಸಿದ್ದಾಳೆ. ನನ್ನ ಮಗಳ ಬಗ್ಗೆ ನನಗೆ ಹೆಮ್ಮೆ ಇದೆ. ಅವಳು ಎಲ್ಲಿಯವರೆಗೆ ವಿದ್ಯಾಭ್ಯಾಸ ಮುಂದುವರಿಸುತ್ತಾಳೋ ಅಲ್ಲಿಯವರೆಗೆ ಓದಿಸಿ ಒಳ್ಳೆ ಅಧಿಕಾರಿಯನ್ನಾಗಿ ಮಾಡುತ್ತೇನೆ. ಹೆಸರಲ್ಲೇ ಇದೆ ಸ್ಫೂರ್ತಿ, ಇನ್ನೊಬ್ಬರಿಗೆ ಸ್ಫೂರ್ತಿ ಆಗುತ್ತಾಳೆ ಎಂಬ ನಂಬಿಕೆ ಇದೆ ಎಂದು ಟಾಪರ್ ಎ.ಸ್ಫೂರ್ತಿ ತಂದೆ ಆನಂದ್ ಮಗಳ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.

ಮನೆಯಲ್ಲಿ ಸ್ಫೂರ್ತಿಗೆ ತಾಯಿಯೇ ಮೊದಲ ಗುರು. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು‌ ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ‌ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾಳೆ ಎಂದರು.

ನಂತರ ತಾಯಿ‌ ನಾಗರತ್ನ ಮಾತನಾಡಿ, ನಾನು ನನ್ನ ಮಗಳು ಓದುವ ಶಾಲೆಯಲ್ಲೇ ಸಹಾಯಕಿಯಾಗಿ ಕೆಲಸ ಮಾಡುತ್ತಾನೆ. ನನ್ನ ಮಗಳ ಬಗ್ಗೆ ನನಗೆ ಬಹಳ ಹೆಮ್ಮೆ‌ ಇದೆ. ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ ಎಂದು ಖುಷಿಪಟ್ಟರು.

ನಂತರ ವಿದ್ಯಾರ್ಥಿನಿ ಎ.ಸ್ಫೂರ್ತಿ ಮಾತನಾಡಿ, ಶಾಲಾ ಶಿಕ್ಷಕರು, ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ‌ ಮಾಡಲು ಸಾಧ್ಯವಾಯಿತು. ನಾನು ಚೆನ್ನಾಗಿ ಓದಿ, ತಂದೆ- ತಾಯಿಗೆ ಒಂದೊಳ್ಳೆ ಗೌರವ ತರಬೇಕು ಎಂದು ಹಠದಿಂದ ಪ್ರತಿ ದಿನ ಅಭ್ಯಾಸ ಮಾಡುತ್ತಿದ್ದೆ. ಅದರ ಪ್ರತಿಫಲ ದಕ್ಕಿದೆ. ಇನ್ನೂ ಅದೇರೀತಿ ಕಠಿಣ ಅಭ್ಯಾಸ ಮಾಡುವ ಮೂಲಕ ಉನ್ನತ ವಿದ್ಯಾಭ್ಯಾ ಮಾಡಿ ಅಧಿಕಾರಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವೆ, ತಂದೆ ತಾಯಿಯನ್ನು ಚೆನ್ನಾಗಿ ನೋಡಿಕಳ್ಳುತ್ತೇನೆ. ನಮ್ಮ ಪೋಷಕರಿಗೆ ಇಬ್ಬರೂ ಹೆಣ್ಣುಮಕ್ಕಳು, ಗಂಡು ಮಗು ಇಲ್ಲ ಆದ್ದರಿಂದ ಎಲ್ಲಾ ನಾವೆ ಅವರಿಗೆ ಆದ್ದರಿಂದ ಅವರನ್ನು ಖುಷಿಯಿಂದ ಇಡಲು ಪ್ರಯತ್ನಿಸುವೆ. ಮುಂದೆ ಸಿಎ ಮಾಡುವೆ ಎಂದು ತಿಳಿಸಿದರು.

ಮಗಳ ಸಾಧನೆಯಿಂದ ಪೋಷಕರ ಕಣ್ಣಂಚಿನಲ್ಲಿ ಆನಂದಭಾಷ್ಪ ಎದ್ದು ಕಾಣುತ್ತಿತ್ತು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

2 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

5 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

9 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

24 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

24 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago