Categories: ರಾಜ್ಯ

ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ- ಸಿಎಂ ಸಿದ್ದರಾಮಯ್ಯ

ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ. ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು. ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು. ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮ ವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ ವ್ಯವಸ್ಥೆಗೆ ಎಂಥ ಸಂವಿಧಾನ ಬೇಕು ಎಂದು ಚಿಂತಿಸಿ ರಚಿಸಿದರು. ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ. ಎಲ್ಲಾ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ ಅದಕ್ಕೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ  ಅಂಶಗಳೇ ಕಾರಣ. ಕಟ್ಟ ಕಡೆಯ ಮನುಷ್ಯನಿಗೂ ಶ್ರೀಮಂತರಿಗೂ ಒಂದೇ ಕಾನೂನು. ಅದಕ್ಕೆ 14ನೇ ಪರಿಚ್ಛೇದದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು, ಎಲ್ಲರಿಗೂ ಕಾನೂನಿನ ರಕ್ಷಣೆಯಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

ಒಂದು ದೇಶದ ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ ಎಂದು ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು. ದೇಶಕ್ಕೆ ದೊರೆತ ಸ್ವಾತಂತ್ರ್ಯ ಯಶಸ್ವಿಯಾಗಲು ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿರಬೇಕು. ಇಲ್ಲವಾದರೆ ಅಸಮಾನತೆಯಿಂದ ನೊಂದ ಜನ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದೂ ಹೇಳಿದ್ದರು. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರನ್ನು ಎಷ್ಟು ನೆನೆದರೂ, ಎಷ್ಟು ಗೌರವ ಸಲ್ಲಿಸಿದರೂ ಕಡಿಮೆಯೇ ಎಂದು  ತಿಳಿಸಿದರು.

ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಪ್ರದರ್ಶನ ರಾಯಭಾರಿಯಾಗಿ ನೇಮಕ ಮಾಡಿದ್ದು, ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಉದಯೋನ್ಮುಖ ನಟ ಹಾಗೂ ಸಾಮಾಜಿಕ ಕಳಕಳಿ ಉಳ್ಳವರು. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣವಾಗಿದೆ. ಇದರಿಂದ ಲಿಡ್ಕರ್ ಉತ್ಪನ್ನಗಳು ಹೆಚ್ಚಾಗಿ  ಮಾರಾಟವಾಗುವುದಲ್ಲದೆ ಚರ್ಮ ಉದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದರು.

8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವೀಗೀಡಾಗಿರುವುದು  ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಪ್ರಾಣ ಬಿಟ್ಟ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ  ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದ್ದೇನೆ ಎಂದರು.

ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago