Categories: ರಾಜ್ಯ

ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ- ಸಿಎಂ ಸಿದ್ದರಾಮಯ್ಯ

ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ. ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು. ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು. ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮ ವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ ವ್ಯವಸ್ಥೆಗೆ ಎಂಥ ಸಂವಿಧಾನ ಬೇಕು ಎಂದು ಚಿಂತಿಸಿ ರಚಿಸಿದರು. ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ. ಎಲ್ಲಾ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ ಅದಕ್ಕೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ  ಅಂಶಗಳೇ ಕಾರಣ. ಕಟ್ಟ ಕಡೆಯ ಮನುಷ್ಯನಿಗೂ ಶ್ರೀಮಂತರಿಗೂ ಒಂದೇ ಕಾನೂನು. ಅದಕ್ಕೆ 14ನೇ ಪರಿಚ್ಛೇದದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು, ಎಲ್ಲರಿಗೂ ಕಾನೂನಿನ ರಕ್ಷಣೆಯಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

ಒಂದು ದೇಶದ ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ ಎಂದು ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು. ದೇಶಕ್ಕೆ ದೊರೆತ ಸ್ವಾತಂತ್ರ್ಯ ಯಶಸ್ವಿಯಾಗಲು ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿರಬೇಕು. ಇಲ್ಲವಾದರೆ ಅಸಮಾನತೆಯಿಂದ ನೊಂದ ಜನ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದೂ ಹೇಳಿದ್ದರು. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರನ್ನು ಎಷ್ಟು ನೆನೆದರೂ, ಎಷ್ಟು ಗೌರವ ಸಲ್ಲಿಸಿದರೂ ಕಡಿಮೆಯೇ ಎಂದು  ತಿಳಿಸಿದರು.

ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಪ್ರದರ್ಶನ ರಾಯಭಾರಿಯಾಗಿ ನೇಮಕ ಮಾಡಿದ್ದು, ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಉದಯೋನ್ಮುಖ ನಟ ಹಾಗೂ ಸಾಮಾಜಿಕ ಕಳಕಳಿ ಉಳ್ಳವರು. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣವಾಗಿದೆ. ಇದರಿಂದ ಲಿಡ್ಕರ್ ಉತ್ಪನ್ನಗಳು ಹೆಚ್ಚಾಗಿ  ಮಾರಾಟವಾಗುವುದಲ್ಲದೆ ಚರ್ಮ ಉದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದರು.

8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವೀಗೀಡಾಗಿರುವುದು  ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಪ್ರಾಣ ಬಿಟ್ಟ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ  ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದ್ದೇನೆ ಎಂದರು.

ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

2 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

3 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

6 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

13 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

16 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago